Featured

ಪಕ್ಷವನ್ನು ಮುಂದಕ್ಕೆ ಕೊಂಡೊಯ್ಯಲು ಸಮರ್ಥನಿದ್ದೇನೆ ಎಂಬ ಭಾವನೆಯೊಂದಿಗೆ ಯುವ ಘಟಕದ ಅಧ್ಯಕ್ಷ ಸ್ಥಾನ ನೀಡಿದ್ದಾರೆ : ನಿಖಿಲ್ ಕುಮಾರಸ್ವಾಮಿ -Vishwanews24

ಬೆಂಗಳೂರು: ಪಕ್ಷದ ನಾಯಕರು ಚಿಕ್ಕ ವಯಸ್ಸಿನಲ್ಲಿ ನನಗೆ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ದೇವೇಗೌಡರು ಇಳಿ ವಯಸ್ಸಿನಲ್ಲಿಯೂ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ನಾನು ಪಕ್ಷ ಕಟ್ಟಲು ಅವರೇ ಸ್ಪೂರ್ತಿ’ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ನಿಖಿಲ್, ಪಕ್ಷವನ್ನು ಮುಂದಕ್ಕೆ ಕೊಂಡೊಯ್ಯಲು ಸಮರ್ಥನಿದ್ದೇನೆ ಎಂಬ ಭಾವನೆಯೊಂದಿಗೆ ಯುವ ಘಟಕದ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಆದರೆ ಇಂದಿಗೂ ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಗುರುತಿಸಿಕೊಳ್ಳಲು ಇಷ್ಟಪಡುತ್ತೇನೆ. ನನಗೆ ಈ ಸ್ಥಾನಮಾನ ಮುಖ್ಯವಾಗುವುದಿಲ್ಲ. ಮಧು ಬಂಗಾರಪ್ಪ ಅವರು ಹಲವು ವರ್ಷದಿಂದ ಈ ಸ್ಥಾನವನ್ನು ಸಂಪೂರ್ಣವಾಗಿ ತುಂಬಿದ್ದಾರೆ.

ಅವರು ಮಾಡಿದ ಒಳ್ಳೆ ಕೆಲಸ ಕಾರ್ಯಗಳನ್ನು ಉಳಿಸಿಕೊಂಡು ಹೋಗಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ನನ್ನ ಎಲ್ಲ ಮತದಾರ ಬಂಧುಗಳಿಗೆ ಧನ್ಯವಾದ ಸಲ್ಲಿಸುತ್ತೇನೆ. ಐದೂ ಮುಕ್ಕಾಲು ಲಕ್ಷ ಜನರು ನಿಖಿಲ್ ಕುಮಾರಸ್ವಾಮಿ ಅಥವಾ ಜನತಾದಳದ ಪರವಾಗಿ ಮತ ಹಾಕಿದ್ದೀರಿ. ಇದು ತಮಾಷೆಯ ಸಂಗತಿ ಅಲ್ಲ. ಐದೂ ಮುಕ್ಕಾಲು ಲಕ್ಷ ಜನ ನನ್ನ ಪರವಾಗಿದ್ದಾರೆ. ನನ್ನ ವಿರುದ್ಧ ಮತಹಾಕಿದವರ ಮನ ಗೆಲ್ಲಲು ಮುಂದಿನ ವರ್ಷಗಳಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಜೆಡಿಎಸ್ ಪಕ್ಷ ಉಳಿದಿರುವುದು ದೇವೇಗೌಡ ಸಾಹೇಬರ ಶ್ರಮದಿಂದ ಮಾತ್ರ. ಸಂಘಟನೆ ಮಾಡುವ ವಿಚಾರದಲ್ಲಿ ನಿರಂತರವಾಗಿ ಅವರ ದುಡಿಮೆಯನ್ನು ಮಾಡಿದ್ದರು. ಇಂದು ನಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಅದೇ ಹಾದಿಯಲ್ಲಿ ನಾನೂ ಹೆಜ್ಜೆ ಹಾಕಬೇಕು ಎಂಬ ನಿರ್ಧಾರ ಮಾಡಿದ್ದೇನೆ ಎಂದು ತಿಳಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

10 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago