Featured

ಪಕ್ಷವನ್ನು ಮುಂದಕ್ಕೆ ಕೊಂಡೊಯ್ಯಲು ಸಮರ್ಥನಿದ್ದೇನೆ ಎಂಬ ಭಾವನೆಯೊಂದಿಗೆ ಯುವ ಘಟಕದ ಅಧ್ಯಕ್ಷ ಸ್ಥಾನ ನೀಡಿದ್ದಾರೆ : ನಿಖಿಲ್ ಕುಮಾರಸ್ವಾಮಿ -Vishwanews24

ಬೆಂಗಳೂರು: ಪಕ್ಷದ ನಾಯಕರು ಚಿಕ್ಕ ವಯಸ್ಸಿನಲ್ಲಿ ನನಗೆ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ದೇವೇಗೌಡರು ಇಳಿ ವಯಸ್ಸಿನಲ್ಲಿಯೂ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ನಾನು ಪಕ್ಷ ಕಟ್ಟಲು ಅವರೇ ಸ್ಪೂರ್ತಿ’ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ನಿಖಿಲ್, ಪಕ್ಷವನ್ನು ಮುಂದಕ್ಕೆ ಕೊಂಡೊಯ್ಯಲು ಸಮರ್ಥನಿದ್ದೇನೆ ಎಂಬ ಭಾವನೆಯೊಂದಿಗೆ ಯುವ ಘಟಕದ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಆದರೆ ಇಂದಿಗೂ ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಗುರುತಿಸಿಕೊಳ್ಳಲು ಇಷ್ಟಪಡುತ್ತೇನೆ. ನನಗೆ ಈ ಸ್ಥಾನಮಾನ ಮುಖ್ಯವಾಗುವುದಿಲ್ಲ. ಮಧು ಬಂಗಾರಪ್ಪ ಅವರು ಹಲವು ವರ್ಷದಿಂದ ಈ ಸ್ಥಾನವನ್ನು ಸಂಪೂರ್ಣವಾಗಿ ತುಂಬಿದ್ದಾರೆ.

ಅವರು ಮಾಡಿದ ಒಳ್ಳೆ ಕೆಲಸ ಕಾರ್ಯಗಳನ್ನು ಉಳಿಸಿಕೊಂಡು ಹೋಗಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ನನ್ನ ಎಲ್ಲ ಮತದಾರ ಬಂಧುಗಳಿಗೆ ಧನ್ಯವಾದ ಸಲ್ಲಿಸುತ್ತೇನೆ. ಐದೂ ಮುಕ್ಕಾಲು ಲಕ್ಷ ಜನರು ನಿಖಿಲ್ ಕುಮಾರಸ್ವಾಮಿ ಅಥವಾ ಜನತಾದಳದ ಪರವಾಗಿ ಮತ ಹಾಕಿದ್ದೀರಿ. ಇದು ತಮಾಷೆಯ ಸಂಗತಿ ಅಲ್ಲ. ಐದೂ ಮುಕ್ಕಾಲು ಲಕ್ಷ ಜನ ನನ್ನ ಪರವಾಗಿದ್ದಾರೆ. ನನ್ನ ವಿರುದ್ಧ ಮತಹಾಕಿದವರ ಮನ ಗೆಲ್ಲಲು ಮುಂದಿನ ವರ್ಷಗಳಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಜೆಡಿಎಸ್ ಪಕ್ಷ ಉಳಿದಿರುವುದು ದೇವೇಗೌಡ ಸಾಹೇಬರ ಶ್ರಮದಿಂದ ಮಾತ್ರ. ಸಂಘಟನೆ ಮಾಡುವ ವಿಚಾರದಲ್ಲಿ ನಿರಂತರವಾಗಿ ಅವರ ದುಡಿಮೆಯನ್ನು ಮಾಡಿದ್ದರು. ಇಂದು ನಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಅದೇ ಹಾದಿಯಲ್ಲಿ ನಾನೂ ಹೆಜ್ಜೆ ಹಾಕಬೇಕು ಎಂಬ ನಿರ್ಧಾರ ಮಾಡಿದ್ದೇನೆ ಎಂದು ತಿಳಿಸಿದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

14 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

14 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

15 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

15 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

15 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

16 hours ago