Featured

ಪಕ್ಷವನ್ನು ಸಂಘಟಿಸಿ ತಳಮಟ್ಟದ ಕಾರ್ಯಕರ್ತರಿಗೆ ಶಕ್ತಿ ತುಂಬುವ ಮೂಲಕ ಪಕ್ಷವನ್ನು ಬಲಪಡಿಸಲು ಎಲ್ಲರೂ ಕಾರ್ಯಪ್ರವೃತ್ತರಾಗೋಣ :ಯಶ್‍ಪಾಲ್ ಸುವರ್ಣ -Vishwanews24

ಪಕ್ಷವನ್ನು ಸಂಘಟಿಸಿ ತಳಮಟ್ಟದ ಕಾರ್ಯಕರ್ತರಿಗೆ ಶಕ್ತಿ ತುಂಬುವ ಮೂಲಕ ಪಕ್ಷವನ್ನು ಬಲಪಡಿಸಲು ಎಲ್ಲರೂ

ಕಾರ್ಯಪ್ರವೃತ್ತರಾಗೋಣ :ಯಶ್‍ಪಾಲ್ ಸುವರ್ಣ -Vishwanews24

ಉಡುಪಿ: ಮುಂಬರುವ ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶ ಭವಿಷ್ಯದ ಎಲ್ಲಾ ಚುನಾವಣೆಗಳಿಗೆ ತಳಹದಿಯಾಗಲಿದ್ದು, ಇಂದಿನಿಂದಲೇ ಬೂತ್‍ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ ತಳಮಟ್ಟದ ಕಾರ್ಯಕರ್ತರಿಗೆ ಶಕ್ತಿ ತುಂಬುವ ಮೂಲಕ ಪಕ್ಷವನ್ನು ಬಲಪಡಿಸಲು ಎಲ್ಲರೂ ಕಾರ್ಯಪ್ರವೃತ್ತರಾಗೋಣ ಎಂದು ಕಾಪು ಬಿಜೆಪಿ ನೂತನ ಪ್ರಭಾರಿ ಯಶ್‍ಪಾಲ್ ಸುವರ್ಣ ಹೇಳಿದರು.

ಕಾಪು ಬಿಜೆಪಿ ಕಛೇರಿಯಲ್ಲಿ ನಡೆದ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಮಂಡಲದ ಅಧ್ಯಕ್ಷ ಶ್ರೀಕಾಂತ ನಾಯಕ್ ಮಾತನಾಡಿ ಜಿಲ್ಲಾ ಬಿಜೆಪಿಯ ಸೂಚನೆಯಂತೆ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ, ದೀನ್ ದಯಾಳ್ ಜಯಂತಿ ಹಾಗೂ ಗಾಂಧಿ ಜಯಂತಿ ಅಂಗವಾಗಿ 3 ವಾರಗಳ ಕಾಲ ಕ್ಷೇತ್ರದಾದ್ಯಂತ ನಿರಂತರ ಸೇವಾ ಸಪ್ತಾಹ ಕಾರ್ಯಕ್ರಮಗಳನ್ನು ರೂಪಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕಾಪು ಬಿಜೆಪಿ ನೂತನ ಪ್ರಭಾರಿಯಾಗಿ ನಿಯುಕ್ತಿಗೊಂಡ ಯಶ್‍ಪಾಲ್ ಸುವರ್ಣ, ಉಡುಪಿ ತಾಲೂಕು ಪಂಚಾಯತ್ ನೂತನ ಅಧ್ಯಕ್ಷರಾದ  ಸಂಧ್ಯಾ ಕಾಮತ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ  ಶಿಲ್ಪಾ ಸುವರ್ಣ, ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷರಾದ   ವೀಣಾ ಶೆಟ್ಟಿ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷರಾದ  ಸುರೇಂದ್ರ ಪಣಿಯೂರು ಜಿಲ್ಲಾ ಮಹಿಳಾ ಮೋರ್ಚಾ ಉಸ್ತುವಾರಿ   ಗೀತಾಂಜಲಿ ಸುವರ್ಣ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ  ರಮಾಕಾಂತ್ ದೇವಾಡಿಗ ರವರನ್ನು ಜಿಲ್ಲಾ ಬಿಜೆಪಿ ನಿಕಟಪೂರ್ವ ಉಪಾಧ್ಯಕ್ಷರಾದ ಸುರೇಶ್ ಶೆಟ್ಟಿ ಗುರ್ಮೆ ಸನ್ಮಾನಿಸಿದರು.

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ  ಶೀಲಾ ಕೆ ಶೆಟ್ಟಿ, ಕಾಪು ಮಂಡಲ ನಿಕಟಪೂರ್ವ ಅಧ್ಯಕ್ಷರಾದ   ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ರೈತ ಮೋರ್ಚಾದ ಅಧ್ಯಕ್ಷರಾದ  ಪ್ರವೀಣ್ ಗುರ್ಮೆ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ   ಗೋಪಾಲ ಕೃಷ್ಣ,   ಅನಿಲ್ ಶೆಟ್ಟಿ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಪುರಸಭೆ ಸದಸ್ಯರು ಮತ್ತು ವಿವಿಧ ಮೋರ್ಚಾಗಳ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

16 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

16 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

16 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

17 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

17 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

17 hours ago