Featured

ಪಕ್ಷಿಕೆರೆ  ಕೊಲೆ ಮತ್ತು‌ ಆತ್ಮಹತ್ಯೆ ಪ್ರಕರಣ : ಕಾರ್ತಿಕ್ ಭಟ್  ವಿರುದ್ಧ ಅವ್ಯವಹಾರ ಆರೋಪ – vishwanews24

ಪಕ್ಷಿಕೆರೆ  ಕೊಲೆ ಮತ್ತು‌ ಆತ್ಮಹತ್ಯೆ ಪ್ರಕರಣ : ಕಾರ್ತಿಕ್ ಭಟ್ ಕೆಲಸ ಮಾಡುತ್ದಿದ್ದ ಬ್ಯಾಂಕ್ ನಲ್ಲಿ ಅವ್ಯವಹಾರ ಆರೋಪ

ಕಿನ್ನಿಗೋಳಿ: ಪಕ್ಷಿಕೆರೆಯಲ್ಲಿ‌ ನಡೆದ ಕೊಲೆ ಮತ್ತು‌ ಆತ್ಮಹತ್ಯೆಗೆ ಸಂಬಂಧಿಸಿದಂತೆ ಕಾರ್ತಿಕ್ ಭಟ್ ನ ಮತ್ತೊಂದು ಅವ್ಯವಹಾರ ಪ್ರಕರಣ ಬೆಳಕಿಗೆ ಬಂದಿದೆ. ಕಾರ್ತಿಕ್ ಭಟ್ ತನ್ನ 10 ಪವನ್ ಚಿನ್ನವನ್ನು ಎಗರಿಸಿದ್ದಾನೆ ಎಂದು ಪಕ್ಷಿಕೆರೆ ಹೊಸಕಾಡು ನಿವಾಸಿ ಮಹಮ್ಮದ್ ಆರೋಪಿಸಿದ್ದಾರೆ.

ಎರಡು ವರ್ಷದ ಹಿಂದೆ ಪಕ್ಷಿಕೆರೆ ಬ್ಯಾಂಕ್ ವೊಂದರಲ್ಲಿ ತನ್ನ 10 ಪವನ್ ಚಿನ್ನವನ್ನು ಅಡವಿಟ್ಟು 1 ಲಕ್ಷ 60 ಸಾವಿರ ಸಾಲ ಪಡೆದಿದ್ದ ಮಹಮ್ಮದ್ ಅವರಿಗೆ ಇನ್ನೂ ಹೆಚ್ಚಿನ ಸಾಲದ ಅಗತ್ಯವಿದೆ ಎಂದು ಅರಿತ ಕಾರ್ತಿಕ್ ಭಟ್‌ ತಾನೂ ಮ್ಯಾನೇಜರ್ ಆಗಿರುವ ಸುಬ್ರಹ್ಮಣ್ಯ ಸಹಕಾರಿ ಸಂಘದಲ್ಲಿ ಅಡವಿಟ್ಟರೆ ಹೆಚ್ಚಿನ ಸಾಲ ನೀಡುವುದಾಗಿ ಭರವಸೆ ನೀಡಿದ್ದ. ಹೀಗಾಗಿ ಮಹಮ್ಮದ್ ಅವರು ಪಕ್ಷಿಕೆರೆ ಬ್ಯಾಂಕ್ ನಲ್ಲಿ ಅಡವಿಟ್ಟ ಚಿನ್ನವನ್ನು ಬಿಡಿಸಿ, ಕಾರ್ತಿಕ್ ಬ್ರಾಂಚ್‌ ಮ್ಯಾನೇಜರ್ ಆಗಿರುವ ಬ್ಯಾಂಕ್ ನಲ್ಲಿ ಇರಿಸಿ 3 ಲಕ್ಷ 4 ಸಾವಿರ ಸಾಲ ಪಡೆದಿದ್ದರು.

ಈ ನಡುವೆ ವೈಯಕ್ತಿಕ ಸಮಸ್ಯೆಯಿಂದ ಮಹಮ್ಮದ್ ಅವರು ಊರಲ್ಲಿ ಇರದ ಕಾರಣ ಬ್ಯಾಂಕ್ ಗೆ ಸರಿಯಾಗಿ ಭೇಟಿ ನೀಡಿರಲಿಲ್ಲ. ಕಾರ್ತಿಕ್ ಅತ್ಮಹತ್ಯೆ ಮಾಡಿದ ಕಾರಣ ಸಂಶಯಗೊಂಡ ಮಹಮ್ಮದ್ ಅವರು ಈ ಬಗ್ಗೆ ಬ್ಯಾಂಕಿನಲ್ಲಿ ವಿಚಾರಿಸಿದಾಗ 4 ತಿಂಗಳಲ್ಲೇ ಅಡವಿಟ್ಟ ಬಂಗಾರ ಬಿಡಿಸಿದ ಬಗ್ಗೆ ಬ್ಯಾಂಕ್ ಅಧಿಕಾರಿಗಳು ವಿವರ ನೀಡಿದ್ದಾರೆ.

ಕಾರ್ತಿಕ್ ಈ ಬಂಗಾರವನ್ನು ಅಲ್ಲಿಂದ ಎಗರಿಸಿ ಅದರ ಮೂಲ ಬೆಲೆಗೆ ಮಾರಿದ್ದಾನೆ ಎಂದು ಬಂಗಾರದ ಒಡವೆ ಕಳಕೊಂಡ ಮಹಮದ್ ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

11 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

12 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

12 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

13 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

13 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

13 hours ago