Featured

ಪಕ್ಷಿಕೆರೆ  ಕೊಲೆ ಮತ್ತು‌ ಆತ್ಮಹತ್ಯೆ ಪ್ರಕರಣ : ಕಾರ್ತಿಕ್ ಭಟ್  ವಿರುದ್ಧ ಅವ್ಯವಹಾರ ಆರೋಪ – vishwanews24

ಪಕ್ಷಿಕೆರೆ  ಕೊಲೆ ಮತ್ತು‌ ಆತ್ಮಹತ್ಯೆ ಪ್ರಕರಣ : ಕಾರ್ತಿಕ್ ಭಟ್ ಕೆಲಸ ಮಾಡುತ್ದಿದ್ದ ಬ್ಯಾಂಕ್ ನಲ್ಲಿ ಅವ್ಯವಹಾರ ಆರೋಪ

ಕಿನ್ನಿಗೋಳಿ: ಪಕ್ಷಿಕೆರೆಯಲ್ಲಿ‌ ನಡೆದ ಕೊಲೆ ಮತ್ತು‌ ಆತ್ಮಹತ್ಯೆಗೆ ಸಂಬಂಧಿಸಿದಂತೆ ಕಾರ್ತಿಕ್ ಭಟ್ ನ ಮತ್ತೊಂದು ಅವ್ಯವಹಾರ ಪ್ರಕರಣ ಬೆಳಕಿಗೆ ಬಂದಿದೆ. ಕಾರ್ತಿಕ್ ಭಟ್ ತನ್ನ 10 ಪವನ್ ಚಿನ್ನವನ್ನು ಎಗರಿಸಿದ್ದಾನೆ ಎಂದು ಪಕ್ಷಿಕೆರೆ ಹೊಸಕಾಡು ನಿವಾಸಿ ಮಹಮ್ಮದ್ ಆರೋಪಿಸಿದ್ದಾರೆ.

ಎರಡು ವರ್ಷದ ಹಿಂದೆ ಪಕ್ಷಿಕೆರೆ ಬ್ಯಾಂಕ್ ವೊಂದರಲ್ಲಿ ತನ್ನ 10 ಪವನ್ ಚಿನ್ನವನ್ನು ಅಡವಿಟ್ಟು 1 ಲಕ್ಷ 60 ಸಾವಿರ ಸಾಲ ಪಡೆದಿದ್ದ ಮಹಮ್ಮದ್ ಅವರಿಗೆ ಇನ್ನೂ ಹೆಚ್ಚಿನ ಸಾಲದ ಅಗತ್ಯವಿದೆ ಎಂದು ಅರಿತ ಕಾರ್ತಿಕ್ ಭಟ್‌ ತಾನೂ ಮ್ಯಾನೇಜರ್ ಆಗಿರುವ ಸುಬ್ರಹ್ಮಣ್ಯ ಸಹಕಾರಿ ಸಂಘದಲ್ಲಿ ಅಡವಿಟ್ಟರೆ ಹೆಚ್ಚಿನ ಸಾಲ ನೀಡುವುದಾಗಿ ಭರವಸೆ ನೀಡಿದ್ದ. ಹೀಗಾಗಿ ಮಹಮ್ಮದ್ ಅವರು ಪಕ್ಷಿಕೆರೆ ಬ್ಯಾಂಕ್ ನಲ್ಲಿ ಅಡವಿಟ್ಟ ಚಿನ್ನವನ್ನು ಬಿಡಿಸಿ, ಕಾರ್ತಿಕ್ ಬ್ರಾಂಚ್‌ ಮ್ಯಾನೇಜರ್ ಆಗಿರುವ ಬ್ಯಾಂಕ್ ನಲ್ಲಿ ಇರಿಸಿ 3 ಲಕ್ಷ 4 ಸಾವಿರ ಸಾಲ ಪಡೆದಿದ್ದರು.

ಈ ನಡುವೆ ವೈಯಕ್ತಿಕ ಸಮಸ್ಯೆಯಿಂದ ಮಹಮ್ಮದ್ ಅವರು ಊರಲ್ಲಿ ಇರದ ಕಾರಣ ಬ್ಯಾಂಕ್ ಗೆ ಸರಿಯಾಗಿ ಭೇಟಿ ನೀಡಿರಲಿಲ್ಲ. ಕಾರ್ತಿಕ್ ಅತ್ಮಹತ್ಯೆ ಮಾಡಿದ ಕಾರಣ ಸಂಶಯಗೊಂಡ ಮಹಮ್ಮದ್ ಅವರು ಈ ಬಗ್ಗೆ ಬ್ಯಾಂಕಿನಲ್ಲಿ ವಿಚಾರಿಸಿದಾಗ 4 ತಿಂಗಳಲ್ಲೇ ಅಡವಿಟ್ಟ ಬಂಗಾರ ಬಿಡಿಸಿದ ಬಗ್ಗೆ ಬ್ಯಾಂಕ್ ಅಧಿಕಾರಿಗಳು ವಿವರ ನೀಡಿದ್ದಾರೆ.

ಕಾರ್ತಿಕ್ ಈ ಬಂಗಾರವನ್ನು ಅಲ್ಲಿಂದ ಎಗರಿಸಿ ಅದರ ಮೂಲ ಬೆಲೆಗೆ ಮಾರಿದ್ದಾನೆ ಎಂದು ಬಂಗಾರದ ಒಡವೆ ಕಳಕೊಂಡ ಮಹಮದ್ ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

20 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago