Featured

ಪಕ್ಷಿಕೆರೆ : ಪತ್ನಿ ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣ: ಕಾರ್ತಿಕ್ ಭಟ್ ತಾಯಿ, ಸಹೋದರಿ ಬಂಧನ.. vishwanews24

ಪಕ್ಷಿಕೆರೆ : ಪತ್ನಿ ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣ: ಕಾರ್ತಿಕ್ ಭಟ್ ತಾಯಿ, ಸಹೋದರಿ ಬಂಧನ..

ಮಂಗಳೂರು : ಮಂಗಳೂರಿನ ಪಕ್ಷಿಕೆರೆಯ ಜಲಜಾಕ್ಷಿ ಅಪಾರ್ಟ್‌ ಮೆಂಟ್‌ನಲ್ಲಿ ಪತ್ನಿ, ಮಗುವನ್ನು ಕೊಲೆ ಮಾಡಿ ಬಳಿಕ ಪತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿ ಮೂಲ್ಕಿ ಪೊಲೀಸರು ಯುವಕನ ತಾಯಿ ಮತ್ತು ಸಹೋದರಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಪಕ್ಷಿಕೆರೆ ಜಲಜಾಕ್ಷಿ ಫ್ಲ್ಯಾಟ್ ನಿವಾಸಿ ಕಾರ್ತಿಕ್ ಭಟ್ (32), ಆತನ ಪತ್ನಿ ಪ್ರಿಯಾಂಕಾ(28) ಮತ್ತು ಪುತ್ರ ಹೃದಯ್ (4) ಮೃತಪಟ್ಟವರು. ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಪ್ರಿಯಾಂಕಾ ಮತ್ತು ಹೃದಯ್ ಕೊಲೆಯಾದ ಸ್ಥಿತಿಯಲ್ಲಿ ಫ್ಲ್ಯಾಟ್‌ನಲ್ಲಿ ಪತ್ತೆಯಾಗಿದ್ದರು. ಈ ಸಂದರ್ಭ ಕಾರ್ತಿಕ್ ಭಟ್‌ ಡೆತನೋಟ್ ಕೂಡ ಬರೆದಿಟ್ಟಿದ್ದರು. ಮೃತ ಪ್ರಿಯಾಂಕಾ ಹೆತ್ತವರು ಶಿವಮೊಗ್ಗದಲ್ಲಿದ್ದು, ಘಟನಾ ಸ್ಥಳಕ್ಕೆ ಬಂದು, ಘಟನೆಗೆ ಕಾರ್ತಿಕ್ ಭಟ್ ಹೆತ್ತವರು ಮತ್ತು ಸಹೋದರಿ ಕಾರಣ ಎಂದು ಮಾಧ್ಯಮದೆದುರು ಅಲವತ್ತುಕೊಂಡಿದ್ದರು. ಬಳಿಕ ಮೂಲ್ಕಿ ಠಾಣೆಗೆ ದೂರನ್ನೂ ನೀಡಿದ್ದರು. ಆದರೆ ಕಾರ್ತಿಕ್ ಭಟ್ ಕುಟುಂಬಿಕರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಈ ಬಗ್ಗೆ ಪೊಲೀಸರು ಕಾರ್ತಿಕ್ ಭಟ್ ಕು ಟುಂಬಿಕರ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ಪ್ರಿಯಾಂಕಾ ಅವರ ತಾಯಿ ಸಾವಿತ್ರಿ ನೀಡಿದ ದೂರಿಗೆ ಸ್ಪಂದಿಸಿದ ಮೂಲ್ಕಿ ಠಾಣೆ ಪೊಲೀಸರು ಕಾರ್ತಿಕ್ ಭಟ್ ತಾಯಿ ಶ್ಯಾಮಲಾ ಭಟ್ (61) ಮತ್ತು ಸಹೋದರಿ ಸುರತ್ಕಲ್ ಬಾಳ ನಿವಾಸಿ ಕಣ್ಮಣಿ ರಾವ್ (36) ಅವರನ್ನು ಸೋಮವಾರ ಬಂಧಿಸಿ ಮೂಡುಬಿದಿರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅವರಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಂಧಿತರ ವಿರುದ್ಧ 308 ‘ಭಾರತೀಯ’ ನ್ಯಾಯಸಂಹಿತ ಪ್ರಕಾರ ಆತ್ಮಹತ್ಯೆ ಪ್ರಚೋದನೆ ಪ್ರಕರಣ ದಾಖಲಾಗಿದೆ.

ಈ ಮಧ್ಯೆ ಕೊಲೆ, ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್‌ ತನಿಖೆ ಮುಂದುವರಿದಿದೆ. ಏತನ್ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿ ಹಲವು ಪ್ರಶ್ನೆಗಳು ಕಾಡುತ್ತಿವೆ. ಕಾರ್ತಿಕ್ ಭಟ್ ಪತ್ನಿ, ಮಗುವನ್ನು ನೇಣಿಗೆ ಹಾಕಲು ಯತ್ನಿಸಿ ವಿಫಲವಾಗಿ ಬಳಿಕ ಟಾಯ್ಲೆಟ್‌ನಲ್ಲಿದ್ದ ಗಾಜಿನಿಂದ ಕೊಲೆ ಮಾಡಿದ್ದು ಯಾಕೆ? ಪ್ರಿಯಾಂಕಾ ತಾಯಿ ಮನೆಗೆ ಮಗುವನ್ನು ಕರೆದುಕೊಂಡು ಹೋಗಿದ್ದಾಗ ಮಗು ಪಕ್ಷಿಕೆರೆಗೆ ಹಿಂತಿರುಗಲು ಹಿಂದೇಟು ಹಾಕಿತ್ತಂತೆ ಎಂಬ ಸುದ್ದಿಯೂ ಹಬ್ಬಿದೆ.

ಪ್ರಿಯಾಂಕಾ ತಾಯಿ ಸುಮಿತ್ರಾ ಮಾಧ್ಯಮ ಜತೆಗೆ ಮಾತನಾಡಿ, ಅಳಿಯ ಕಾರ್ತಿಕ್ ವಿದೇಶಕ್ಕೆ ಹೋಗುವಂತೆ ಅವರ ತಾಯಿ ಒತ್ತಾಯ ಮಾಡುತ್ತಿದ್ದರು. ಅಲ್ಲದೆ ಪ್ರಿಯಾಂಕಾ ಕೆಲಸಕ್ಕೆ ಹೋಗಲೂ ಒತ್ತಾ ಯಿಸುತ್ತಿದ್ದರು. ಕಾರ್ತಿಕ್ ತನ್ನ ಪತ್ನಿ ಜತೆ ಜಗಳ ಮಾಡಲು ಸಾಧ್ಯವಿಲ್ಲ ಎಂದೂ ತಿಳಿಸಿದ್ದರು. ಹಾಗಿದ್ದರೆ ದಂಪತಿ ನಡುವೆ ಮನಸ್ತಾಪಕ್ಕೆ ಕಾರಣವೇನು ಎಂಬುದು ಗೊಂದಲ ಮೂಡಿಸುತ್ತಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

20 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago