Featured

ಪಕ್ಷಿಕೆರೆ : ಪತ್ನಿ ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣ: ಕಾರ್ತಿಕ್ ಭಟ್ ತಾಯಿ, ಸಹೋದರಿ ಬಂಧನ.. vishwanews24

ಪಕ್ಷಿಕೆರೆ : ಪತ್ನಿ ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣ: ಕಾರ್ತಿಕ್ ಭಟ್ ತಾಯಿ, ಸಹೋದರಿ ಬಂಧನ..

ಮಂಗಳೂರು : ಮಂಗಳೂರಿನ ಪಕ್ಷಿಕೆರೆಯ ಜಲಜಾಕ್ಷಿ ಅಪಾರ್ಟ್‌ ಮೆಂಟ್‌ನಲ್ಲಿ ಪತ್ನಿ, ಮಗುವನ್ನು ಕೊಲೆ ಮಾಡಿ ಬಳಿಕ ಪತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿ ಮೂಲ್ಕಿ ಪೊಲೀಸರು ಯುವಕನ ತಾಯಿ ಮತ್ತು ಸಹೋದರಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಪಕ್ಷಿಕೆರೆ ಜಲಜಾಕ್ಷಿ ಫ್ಲ್ಯಾಟ್ ನಿವಾಸಿ ಕಾರ್ತಿಕ್ ಭಟ್ (32), ಆತನ ಪತ್ನಿ ಪ್ರಿಯಾಂಕಾ(28) ಮತ್ತು ಪುತ್ರ ಹೃದಯ್ (4) ಮೃತಪಟ್ಟವರು. ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಪ್ರಿಯಾಂಕಾ ಮತ್ತು ಹೃದಯ್ ಕೊಲೆಯಾದ ಸ್ಥಿತಿಯಲ್ಲಿ ಫ್ಲ್ಯಾಟ್‌ನಲ್ಲಿ ಪತ್ತೆಯಾಗಿದ್ದರು. ಈ ಸಂದರ್ಭ ಕಾರ್ತಿಕ್ ಭಟ್‌ ಡೆತನೋಟ್ ಕೂಡ ಬರೆದಿಟ್ಟಿದ್ದರು. ಮೃತ ಪ್ರಿಯಾಂಕಾ ಹೆತ್ತವರು ಶಿವಮೊಗ್ಗದಲ್ಲಿದ್ದು, ಘಟನಾ ಸ್ಥಳಕ್ಕೆ ಬಂದು, ಘಟನೆಗೆ ಕಾರ್ತಿಕ್ ಭಟ್ ಹೆತ್ತವರು ಮತ್ತು ಸಹೋದರಿ ಕಾರಣ ಎಂದು ಮಾಧ್ಯಮದೆದುರು ಅಲವತ್ತುಕೊಂಡಿದ್ದರು. ಬಳಿಕ ಮೂಲ್ಕಿ ಠಾಣೆಗೆ ದೂರನ್ನೂ ನೀಡಿದ್ದರು. ಆದರೆ ಕಾರ್ತಿಕ್ ಭಟ್ ಕುಟುಂಬಿಕರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಈ ಬಗ್ಗೆ ಪೊಲೀಸರು ಕಾರ್ತಿಕ್ ಭಟ್ ಕು ಟುಂಬಿಕರ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ಪ್ರಿಯಾಂಕಾ ಅವರ ತಾಯಿ ಸಾವಿತ್ರಿ ನೀಡಿದ ದೂರಿಗೆ ಸ್ಪಂದಿಸಿದ ಮೂಲ್ಕಿ ಠಾಣೆ ಪೊಲೀಸರು ಕಾರ್ತಿಕ್ ಭಟ್ ತಾಯಿ ಶ್ಯಾಮಲಾ ಭಟ್ (61) ಮತ್ತು ಸಹೋದರಿ ಸುರತ್ಕಲ್ ಬಾಳ ನಿವಾಸಿ ಕಣ್ಮಣಿ ರಾವ್ (36) ಅವರನ್ನು ಸೋಮವಾರ ಬಂಧಿಸಿ ಮೂಡುಬಿದಿರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅವರಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಂಧಿತರ ವಿರುದ್ಧ 308 ‘ಭಾರತೀಯ’ ನ್ಯಾಯಸಂಹಿತ ಪ್ರಕಾರ ಆತ್ಮಹತ್ಯೆ ಪ್ರಚೋದನೆ ಪ್ರಕರಣ ದಾಖಲಾಗಿದೆ.

ಈ ಮಧ್ಯೆ ಕೊಲೆ, ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್‌ ತನಿಖೆ ಮುಂದುವರಿದಿದೆ. ಏತನ್ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿ ಹಲವು ಪ್ರಶ್ನೆಗಳು ಕಾಡುತ್ತಿವೆ. ಕಾರ್ತಿಕ್ ಭಟ್ ಪತ್ನಿ, ಮಗುವನ್ನು ನೇಣಿಗೆ ಹಾಕಲು ಯತ್ನಿಸಿ ವಿಫಲವಾಗಿ ಬಳಿಕ ಟಾಯ್ಲೆಟ್‌ನಲ್ಲಿದ್ದ ಗಾಜಿನಿಂದ ಕೊಲೆ ಮಾಡಿದ್ದು ಯಾಕೆ? ಪ್ರಿಯಾಂಕಾ ತಾಯಿ ಮನೆಗೆ ಮಗುವನ್ನು ಕರೆದುಕೊಂಡು ಹೋಗಿದ್ದಾಗ ಮಗು ಪಕ್ಷಿಕೆರೆಗೆ ಹಿಂತಿರುಗಲು ಹಿಂದೇಟು ಹಾಕಿತ್ತಂತೆ ಎಂಬ ಸುದ್ದಿಯೂ ಹಬ್ಬಿದೆ.

ಪ್ರಿಯಾಂಕಾ ತಾಯಿ ಸುಮಿತ್ರಾ ಮಾಧ್ಯಮ ಜತೆಗೆ ಮಾತನಾಡಿ, ಅಳಿಯ ಕಾರ್ತಿಕ್ ವಿದೇಶಕ್ಕೆ ಹೋಗುವಂತೆ ಅವರ ತಾಯಿ ಒತ್ತಾಯ ಮಾಡುತ್ತಿದ್ದರು. ಅಲ್ಲದೆ ಪ್ರಿಯಾಂಕಾ ಕೆಲಸಕ್ಕೆ ಹೋಗಲೂ ಒತ್ತಾ ಯಿಸುತ್ತಿದ್ದರು. ಕಾರ್ತಿಕ್ ತನ್ನ ಪತ್ನಿ ಜತೆ ಜಗಳ ಮಾಡಲು ಸಾಧ್ಯವಿಲ್ಲ ಎಂದೂ ತಿಳಿಸಿದ್ದರು. ಹಾಗಿದ್ದರೆ ದಂಪತಿ ನಡುವೆ ಮನಸ್ತಾಪಕ್ಕೆ ಕಾರಣವೇನು ಎಂಬುದು ಗೊಂದಲ ಮೂಡಿಸುತ್ತಿದೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

12 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

12 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

12 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

16 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

16 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

16 hours ago