ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಜಲಜಾಕ್ಷಿ ರೆಸಿಡೆನ್ಸಿ ಬಹು ಮಹಡಿ ಕಟ್ಟಡದಲ್ಲಿ ವಾಸವಿದ್ದ ವ್ಯಕ್ತಿನೋರ್ವ ಪತ್ನಿ, ಮಗುವನ್ನು ಹತ್ಯೆಗೈದು ತಾನೂ ರೈಲಿನಡಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಕಾರ್ತಿಕ್ ಭಟ್ (32) ಎಂದು ಗುರುತಿಸಲಾಗಿದ್ದು, ಪತ್ನಿ ಪ್ರಿಯಾಂಕ (28), ಮಗು ಹೃದಯ್ (4) ಹತ್ಯೆಗೀಡಾದ ದುರ್ದೈವಿಗಳು ಎಂದು ತಿಳಿದುಬಂದಿದೆ. ಶುಕ್ರವಾರ ಈ ಘಟನೆ ನಡೆದಿದೆ ಎನ್ನಲಾಗಿದೆ.
ಆರೋಪಿ ಕಾರ್ತಿಕ್ ಪಕ್ಷಿಕೆರೆಯಲ್ಲಿರುವ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಹತ್ಯೆಗೈದು ಮುಲ್ಕಿಯ ಬೆಳಾಯರುನಲ್ಲಿ ರೈಲಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾನೆ.
ಶುಕ್ರವಾರ ಮಧ್ಯಾಹ್ನ ವ್ಯಕ್ತಿನೋರ್ವ ರೈಲಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ತನಿಖೆ ನಡೆಸುವಾಗ ಅತ್ಮಹತ್ಯೆ ಮಾಡಿಕೊಂಡವನು ಪಕ್ಷಿಕೆರೆಯ ಕಾರ್ತಿಕ್ ಭಟ್ ಎಂದು ತಿಳಿದಿದ್ದು, ಮನೆಗೆ ಬಂದಾಗ ಪತ್ನಿ ಮಗು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಮಂಗಳೂರು ಎಸಿಪಿ ಶ್ರೀಕಾಂತ್, ಮುಲ್ಕಿ ಪೊಲೀಸ್ ಇನ್ಸ್ಪೆಕ್ಟರ್ ವಿದ್ಯಾಧರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ನಡೆಸುತ್ತಿದ್ದಾರೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…