Featured

ಪಕ್ಷೇತರಳಾಗಿ ಸ್ಪರ್ಧೆ ಮಾಡುವುದಿಲ್ಲ; ದೇಶ ಮೊದಲು ,ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಬೇಕಾದರೆ ಒಂದಾಗಿ ಕೆಲಸ ಮಾಡಬೇಕು : ತೇಜಸ್ವಿನಿ ಅನಂತ್ ಕುಮಾರ್ – Vishwanews24

ಬೆಂಗಳೂರು: ಸ್ವತಂತ್ರವಾಗಿ ನಿಲ್ಲುವ ಬೆಂಬಲಿಗರ ನಿರ್ಣಯವನ್ನು ಮಾಜಿ ಕೇಂದ್ರ ಸಚಿವ, ದಿವಂಗತ ಅನಂತ್​ ಕುಮಾರ್​ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರು ತಳ್ಳಿಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ ಸ್ವತಂತ್ರವಾಗಿ ನಿಲ್ಲುವುದಿಲ್ಲ. ನಾವು ಪಕ್ಷದ ಜತೆಗಿದ್ದೇವೆ. ಪ್ರಚಾರದ ಜವಾಬ್ದಾರಿ ನಮ್ಮ ಮೇಲಿದೆ. ಮೋದಿಯವರು ಮತ್ತೊಮ್ಮೆ ನಮ್ಮ ಪ್ರಧಾನಿಯಾಗಬೇಕು. ಪಕ್ಷಕ್ಕಾಗಿ ನಾವು ಕೆಲಸ ಮಾಡುತ್ತೇವೆ. ಹೀಗಾಗಿ ಸಮಾಧಾನದಿಂದ ವರ್ತಿಸಬೇಕು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.

ದೇಶ ಮೊದಲು ಪಕ್ಷ ಆಮೇಲೆ ಎಂಬುದು ಮುಖ್ಯ. ನಮ್ಮ ಪ್ರಬುದ್ಧತೆಯನ್ನು ತೋರಿಸುವ ಸಂದರ್ಭ ಇದಾಗಿದ್ದು, ಪಕ್ಷದ ಮುಖಂಡರ ತೀರ್ಮಾನಕ್ಕೆ ನಾನು ಬದ್ಧಳಾಗಿರುತ್ತೇನೆ. ಬೇರೆ ರೀತಿಯಲ್ಲಿ ಯೋಚನೆ ಮಾಡುವುದು ಬೇಡ. ಯಾವುದೇ ಊಹಾಪೋಹಗಳಿಗೆ ಯಾರು ಕಿವಿಗೊಡಬೇಡಿ. ಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡೋಣ ಎಂದು ತಿಳಿಸಿದರು.

ಅನಂತಕುಮಾರ್ ಹಾದಿಯಲ್ಲಿ ನಾವೆಲ್ಲ ಮುನ್ನಡೆಯಬೇಕು. ಹಾಗೆ ಮಾಡಿದರೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದ ಅವರು ಕುಟುಂಬ ರಾಜಕಾರಣದಲ್ಲಿ ನಮಗೆ ನಂಬಿಕೆಯಿಲ್ಲ. ಆದರೆ, ಬಿಜೆಪಿ ಅಧಿಕಾರಕ್ಕೆ ಬರುವುದಕ್ಕೆ ನಮ್ಮ ಪ್ರಚಾರ ನಿರಂತರವಾಗಿರುತ್ತದೆ ಎಂದು ತಿಳಿಸಿದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

4 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

5 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

5 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

5 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

5 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

5 hours ago