ಬೆಂಗಳೂರು: ಸ್ವತಂತ್ರವಾಗಿ ನಿಲ್ಲುವ ಬೆಂಬಲಿಗರ ನಿರ್ಣಯವನ್ನು ಮಾಜಿ ಕೇಂದ್ರ ಸಚಿವ, ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರು ತಳ್ಳಿಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ಸ್ವತಂತ್ರವಾಗಿ ನಿಲ್ಲುವುದಿಲ್ಲ. ನಾವು ಪಕ್ಷದ ಜತೆಗಿದ್ದೇವೆ. ಪ್ರಚಾರದ ಜವಾಬ್ದಾರಿ ನಮ್ಮ ಮೇಲಿದೆ. ಮೋದಿಯವರು ಮತ್ತೊಮ್ಮೆ ನಮ್ಮ ಪ್ರಧಾನಿಯಾಗಬೇಕು. ಪಕ್ಷಕ್ಕಾಗಿ ನಾವು ಕೆಲಸ ಮಾಡುತ್ತೇವೆ. ಹೀಗಾಗಿ ಸಮಾಧಾನದಿಂದ ವರ್ತಿಸಬೇಕು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.
ದೇಶ ಮೊದಲು ಪಕ್ಷ ಆಮೇಲೆ ಎಂಬುದು ಮುಖ್ಯ. ನಮ್ಮ ಪ್ರಬುದ್ಧತೆಯನ್ನು ತೋರಿಸುವ ಸಂದರ್ಭ ಇದಾಗಿದ್ದು, ಪಕ್ಷದ ಮುಖಂಡರ ತೀರ್ಮಾನಕ್ಕೆ ನಾನು ಬದ್ಧಳಾಗಿರುತ್ತೇನೆ. ಬೇರೆ ರೀತಿಯಲ್ಲಿ ಯೋಚನೆ ಮಾಡುವುದು ಬೇಡ. ಯಾವುದೇ ಊಹಾಪೋಹಗಳಿಗೆ ಯಾರು ಕಿವಿಗೊಡಬೇಡಿ. ಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡೋಣ ಎಂದು ತಿಳಿಸಿದರು.
ಅನಂತಕುಮಾರ್ ಹಾದಿಯಲ್ಲಿ ನಾವೆಲ್ಲ ಮುನ್ನಡೆಯಬೇಕು. ಹಾಗೆ ಮಾಡಿದರೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದ ಅವರು ಕುಟುಂಬ ರಾಜಕಾರಣದಲ್ಲಿ ನಮಗೆ ನಂಬಿಕೆಯಿಲ್ಲ. ಆದರೆ, ಬಿಜೆಪಿ ಅಧಿಕಾರಕ್ಕೆ ಬರುವುದಕ್ಕೆ ನಮ್ಮ ಪ್ರಚಾರ ನಿರಂತರವಾಗಿರುತ್ತದೆ ಎಂದು ತಿಳಿಸಿದರು.
ಉಡುಪಿ: ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…