ಬೆಂಗಳೂರು: ಸ್ವತಂತ್ರವಾಗಿ ನಿಲ್ಲುವ ಬೆಂಬಲಿಗರ ನಿರ್ಣಯವನ್ನು ಮಾಜಿ ಕೇಂದ್ರ ಸಚಿವ, ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರು ತಳ್ಳಿಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ಸ್ವತಂತ್ರವಾಗಿ ನಿಲ್ಲುವುದಿಲ್ಲ. ನಾವು ಪಕ್ಷದ ಜತೆಗಿದ್ದೇವೆ. ಪ್ರಚಾರದ ಜವಾಬ್ದಾರಿ ನಮ್ಮ ಮೇಲಿದೆ. ಮೋದಿಯವರು ಮತ್ತೊಮ್ಮೆ ನಮ್ಮ ಪ್ರಧಾನಿಯಾಗಬೇಕು. ಪಕ್ಷಕ್ಕಾಗಿ ನಾವು ಕೆಲಸ ಮಾಡುತ್ತೇವೆ. ಹೀಗಾಗಿ ಸಮಾಧಾನದಿಂದ ವರ್ತಿಸಬೇಕು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.
ದೇಶ ಮೊದಲು ಪಕ್ಷ ಆಮೇಲೆ ಎಂಬುದು ಮುಖ್ಯ. ನಮ್ಮ ಪ್ರಬುದ್ಧತೆಯನ್ನು ತೋರಿಸುವ ಸಂದರ್ಭ ಇದಾಗಿದ್ದು, ಪಕ್ಷದ ಮುಖಂಡರ ತೀರ್ಮಾನಕ್ಕೆ ನಾನು ಬದ್ಧಳಾಗಿರುತ್ತೇನೆ. ಬೇರೆ ರೀತಿಯಲ್ಲಿ ಯೋಚನೆ ಮಾಡುವುದು ಬೇಡ. ಯಾವುದೇ ಊಹಾಪೋಹಗಳಿಗೆ ಯಾರು ಕಿವಿಗೊಡಬೇಡಿ. ಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡೋಣ ಎಂದು ತಿಳಿಸಿದರು.
ಅನಂತಕುಮಾರ್ ಹಾದಿಯಲ್ಲಿ ನಾವೆಲ್ಲ ಮುನ್ನಡೆಯಬೇಕು. ಹಾಗೆ ಮಾಡಿದರೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದ ಅವರು ಕುಟುಂಬ ರಾಜಕಾರಣದಲ್ಲಿ ನಮಗೆ ನಂಬಿಕೆಯಿಲ್ಲ. ಆದರೆ, ಬಿಜೆಪಿ ಅಧಿಕಾರಕ್ಕೆ ಬರುವುದಕ್ಕೆ ನಮ್ಮ ಪ್ರಚಾರ ನಿರಂತರವಾಗಿರುತ್ತದೆ ಎಂದು ತಿಳಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…