ಮೈಸೂರು: ನನ್ನ ಜೀವ ಇರುವವರೆಗೂ ನಾನು ಮೋದಿ ಭಕ್ತ. ನಾನು ಪಕ್ಷದ ಕಟ್ಟಾಳು. ಯಾರು ಏನೇ ಕೊಡ್ತೀನಿ ಅಂದರೂ ನಾನು ಎಲ್ಲೂ ಹೋಗಲ್ಲ. ಸಾಯೋವರೆಗೂ ನಾನು ಬಿಜೆಪಿ ಕಾರ್ಯಕರ್ತ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಸಂಸದ ಪ್ರತಾಪ್ ಸಿಂಹಗೆ ಪತ್ರಕರ್ತರ ಭವನದಲ್ಲಿ ಅಭಿನಂದನಾ ಸಮಾರಂಭ ನಡೆಯಿತು. ಬಳಿಕ ಮಾತನಾಡಿದ ಅವರು, ಮೋದಿಜೀ ಗೆ ನನಗೆ ಸದಾ ಪ್ರೇರಣೆ, ಸ್ಪೂರ್ತಿ. ಮೋದಿಜಿ ಏನೇ ನಿರ್ಧಾರ ತೆಗೆದು ಕೊಂಡರು ನಾನು ಅದನ್ನು ಸ್ವೀಕರಿಸುತ್ತೇನೆ. ಮೋದಿಗಿಂತ ದೊಡ್ಡದು ಯಾವುದೂ ಇಲ್ಲ. ಅವಕಾಶ ಮಾಡಿಕೊಟ್ಟರು ತೃಪ್ತಿ ಇದೆ. ಮಾಡದೆ ಇದ್ದರೂ ತೃಪ್ತಿ ಇದೆ. ಟಿಕೆಟ್ ವಿಚಾರದಲ್ಲಿ ಯಡಿಯೂರಪ್ಪ ಅವರನ್ನು ಎಳೆದು ತರಬೇಡಿ ಎಂದು ಮನವಿ ಮಾಡಿಕೊಂಡರು.
ಯಡಿಯೂರಪ್ಪ ಅವರು ಪಕ್ಷ ಕಟ್ಟದೆ ಇದ್ದರೆ ಕರ್ನಾಟಕದಲ್ಲಿ ಬಿಜೆಪಿ ಎಲ್ಲಿ ಇರುತ್ತಿತ್ತು?. ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಬಿಜೆಪಿಯನ್ನು ಯಡಿಯೂರಪ್ಪ ಅವರು ಕಟ್ಟದೆ ಇದ್ದರೆ ನಮ್ಮಂಥವರು ಸಂಸದ ಆಗೋದಿಕ್ಕೆ ಆಗುತ್ತಿತ್ತಾ?. ಕರ್ನಾಟಕಕ್ಕೆ ಯಡಿಯೂರಪ್ಪ ಅವರು ಒಂಥರ ಮೋದಿ ಇದ್ದ ರೀತಿ ಎಂದರು.
ಟಿಕೆಟ್ ಕೊಟ್ಟರೆ ಸಂಸದನಾಗಿ ಕೆಲಸ ಮಾಡ್ತೀನಿ. ಮಹಾರಾಜರಿಗೆ ಕೊಟ್ಟರೆ ಕಾರ್ಯಕರ್ತನಾಗಿ ಕೆಲಸ ಮಾಡ್ತೀನಿ. ಪಕ್ಷ ಯಾರಿಗೆ ಟಿಕೆಟ್ ಕೊಟ್ಟರು ಅವರನ್ನು ಗೆಲ್ಲಿಸಿಕೊಂಡು ಬರುವುದು ನಮ್ಮ ಜವಾಬ್ದಾರಿ. ನಾನೇನೂ ಸಾಯುವವರೆಗೂ ಪಾಲಿಟಿಕ್ಸ್ ಮಾಡಲು ಬಂದಿಲ್ಲ. ಇದೇ ನನ್ನ ಕೊನೆ ಚುನಾವಣೆ ಅಂತಾ ಹೇಳಿದ್ದೆ. ಅವಕಾಶ ಸಿಕ್ಕರೆ ಕೆಲಸ ಮಾಡ್ತಿನಿ. ನಾನು ಸತ್ತ ಮೇಲೂ ಮೈಸೂರಿನ ಜನ ನನ್ನ ನೆನಪಿಟ್ಟು ಕೊಳ್ಳುವಂತಾ ಕೆಲಸ ಮಾಡಿದ್ದೇನೆ. ನನಗೆ ಆಕಸ್ಮಾತ್ ಟಿಕೆಟ್ ತಪ್ಪಿದರು ಬೇಸರ ಪಟ್ಟುಕೊಳ್ಳಬೇಡಿ. ನಾವೆಲ್ಲಾ ಜೊತೆಯಾಗಿ ಇದ್ದು ಕೆಲಸ ಮಾಡೋಣ ಎಂದು ಹೇಳಿದರು.
ಎರಡು ಬಾರಿ ಮೈಸೂರು-ಕೊಡಗು ಸಂಸದನಾಗಿ ಕೆಲಸ ಮಾಡಿದ್ದ ಸಂಸದ ಪ್ರತಾಪ್ ಸಿಂಹ ಗೆ ಈ ಬಾರಿ ಟಿಕೆಟ್ ಕೈತಪ್ಪುವ ಆತಂಕ ಎದುರಾಗಿದೆ. ಪ್ರತಾಪ್ ಸಿಂಹ ಬದಲಿಗೆ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರಿಗೆ ಟಿಕೆಟ್ ನೀಡಲಾಗುತ್ತೆ ಎನ್ನಲಾಗುತ್ತಿದೆ. ಸದ್ಯ ಈ ವಿಚಾರವಾಗಿ ನಗರದಲ್ಲಿ ಮಾತನಾಡಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. 1960ರಲ್ಲಿ ನಮ್ಮಪ್ಪ ಜನಸಂಘದಲ್ಲಿ ಇದ್ದರು. ಕರ್ನಾಟಕದಲ್ಲಿ ಎಷ್ಟು ಸಂಸದರ ಪರವಾಗಿ ಹೋರಾಟ ಆಗುತ್ತಿದೆ? ಟಿಕೆಟ್ ಕೊಡಬೇಕು ಅಂತಾ ಜನ ಕೇಳುತ್ತಿದ್ದಾರೆ, ನನಗೆ ಅಷ್ಟೇ ಸಾಕು ಎಂದು ಹೇಳಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…