ಪಕ್ಷ ಕಟ್ಟೋ ಶಕ್ತಿ ವಿಜಯೇಂದ್ರಗೆ ಮಾತ್ರ ಇದೆ ಅನ್ನೋದು ನಿಜ : ರೇಣುಕಾಚಾರ್ಯ – vishwanews24
ವಿಜಯೇಂದ್ರರನ್ನ ಟೀಕೆ ಮಾಡೋದು ಮೋದಿ, ಅಮಿತ್ ಶಾ ನಡ್ಡಾರನ್ನ ಟೀಕೆ ಮಾಡಿದಂತೆ..
ನಮ್ಮ ಒಳಜಗಳದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ..
ವಿಜಯೇಂದ್ರರನ್ನು ಕೆಳಗಿಳಿಸಿದರೆ ಬಿಜೆಪಿಗೆ ಹತ್ತು ಸೀಟೂ ಬರಲ್ಲ..
ಹೈಕಮಾಂಡ್ ವಿಜಯೇಂದ್ರರನ್ನ ಕೆಳಗಿಳಿಸಲ್ಲ, ಅವರೇ ಮುಂದುವರೀತಾರೆ ಅನ್ನೋ ವಿಶ್ವಾಸ ಇದೆ..: ಎಂ.ಪಿ ರೇಣುಕಾಚಾರ್ಯ
ಬೆಂಗಳೂರು : ಪಕ್ಷ ಕಟ್ಟೋ ಶಕ್ತಿ ವಿಜಯೇಂದ್ರಗೆ ಮಾತ್ರ ಇದೆ ಅನ್ನೋದು ನಿಜ. ವಿಜಯೇಂದ್ರರನ್ನ ಟೀಕೆ ಮಾಡೋದು ಮೋದಿ, ಅಮಿತ್ ಶಾ ನಡ್ಡಾರನ್ನ ಟೀಕೆ ಮಾಡಿದಂತೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಒಳಜಗಳದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಈಗ ವಿಜಯೇಂದ್ರರನ್ನು ಕೆಳಗಿಳಿಸಿದರೆ ಬಿಜೆಪಿಗೆ ಹತ್ತು ಸೀಟೂ ಬರಲ್ಲ. ಹೈಕಮಾಂಡ್ ವಿಜಯೇಂದ್ರರನ್ನ ಕೆಳಗಿಳಿಸಲ್ಲ, ಅವರೇ ಮುಂದುವರೀತಾರೆ ಅನ್ನೋ ವಿಶ್ವಾಸ ಇದೆ. ಇದೇ ಗುಡ್ ನ್ಯೂಸ್ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮರು ಆಯ್ಕೆಯಾದರೆ ನಮ್ಮ ನಿರ್ಣಯ ತಿಳಿಸುತ್ತೇವೆ: ಯತ್ನಾಳ್ – vishwanews24
ಪಕ್ಷದಲ್ಲಿನ ಬೆಳವಣಿಗೆ ನೋಡಿ ಜನ ಉಗೀತಿದ್ದಾರೆ. ಕಾರ್ಯಕರ್ತರಿಗೆ ನೋವಾಗಿದೆ. ನಾವು ಸೈಲೆಂಟ್ ಇದ್ವಿ, ಯಡಿಯೂರಪ್ಪ, ವಿಜಯೇಂದ್ರ ಮಾತಾಡಬೇಡಿ ಅಂದಿದ್ರು. ಆದ್ರೆ ನಮಗೆ ನೋವಾಗಿದೆ. ಹೀಗಾಗಿ ಇಂದು ತುರ್ತು ಸಭೆ ನಡೆಸಬೇಕಾಯಿತು ಎಂದು ಹೇಳಿದ್ದಾರೆ.
ಕಳೆದ 3-4 ತಿಂಗಳಿಂದ ಜೆ.ಪಿ ನಡ್ಡಾ, ಅಮಿತ್ ಶಾ ಭೇಟಿ ಮಾಡಲಾಗ್ತಿಲ್ಲ, ಯತ್ನಾಳ್ ತಂಡ ಭೇಟಿ ಮಾಡಿದ್ದೀವಿ ಅಂತ ಸುಳ್ಳು ಹೇಳಿಕೊಂಡು ಸ್ಟೋರಿಗಳನ್ನು ಪ್ಲಾಂಟ್ ಮಾಡಿಸ್ತಿದ್ದಾರೆ. ಭೇಟಿಯಾದ ಫೋಟೋ ಕೊಡಿ ಅಂದ್ರೆ ಇಲ್ಲ ತೆಗೀಬೇಡಿ ಅಂದಿದ್ದಾರೆ ಅಂತ ಹೇಳ್ತೀರಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ವಿಜಯೇಂದ್ರರನ್ನ ನೀವು ಕುಗ್ಗಿಸಲು ಆಗಲ್ಲ. ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿ ಪಕ್ಷ ಕಟ್ಟಿದ್ರು. ಅದೇ ರೀತಿ ವಿಜಯೇಂದ್ರ ನಾಡಿನ ಯುವಕರ ಕಣ್ಮಣಿ ಆಗಿದ್ದಾರೆ. ಅಂಥವರ ಬಗ್ಗೆ ಮಾತಾಡ್ತೀರ? ಮುಂದಿನ ವಾರ ನಾವು ಮತ್ತೆ ಸಭೆ ಮಾಡ್ತೀವಿ. 100ಕ್ಕೂ ಹೆಚ್ಚು ಜನ ಸೇರಿ ದೊಡ್ಡ ಸಭೆ ಮಾಡ್ತೀವಿ ಎಂದರು.
ತಾಂತ್ರಿಕ ತೊಂದರೆಯಿಂದ ಗ್ಯಾರಂಟಿ ಹಣ ಬಿಡುಗಡೆ ಸಮಸ್ಯೆಯಾಗಿದೆ : ಶಾಸಕ ಕೆ.ಎಸ್ ಬಸವಂತಪ್ಪ – vishwanews24
