ಬೆಂಗಳೂರು : ಪಕ್ಷ ಕಟ್ಟೋ ಶಕ್ತಿ ವಿಜಯೇಂದ್ರಗೆ ಮಾತ್ರ ಇದೆ ಅನ್ನೋದು ನಿಜ. ವಿಜಯೇಂದ್ರರನ್ನ ಟೀಕೆ ಮಾಡೋದು ಮೋದಿ, ಅಮಿತ್ ಶಾ ನಡ್ಡಾರನ್ನ ಟೀಕೆ ಮಾಡಿದಂತೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಒಳಜಗಳದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಈಗ ವಿಜಯೇಂದ್ರರನ್ನು ಕೆಳಗಿಳಿಸಿದರೆ ಬಿಜೆಪಿಗೆ ಹತ್ತು ಸೀಟೂ ಬರಲ್ಲ. ಹೈಕಮಾಂಡ್ ವಿಜಯೇಂದ್ರರನ್ನ ಕೆಳಗಿಳಿಸಲ್ಲ, ಅವರೇ ಮುಂದುವರೀತಾರೆ ಅನ್ನೋ ವಿಶ್ವಾಸ ಇದೆ. ಇದೇ ಗುಡ್ ನ್ಯೂಸ್ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಕ್ಷದಲ್ಲಿನ ಬೆಳವಣಿಗೆ ನೋಡಿ ಜನ ಉಗೀತಿದ್ದಾರೆ. ಕಾರ್ಯಕರ್ತರಿಗೆ ನೋವಾಗಿದೆ. ನಾವು ಸೈಲೆಂಟ್ ಇದ್ವಿ, ಯಡಿಯೂರಪ್ಪ, ವಿಜಯೇಂದ್ರ ಮಾತಾಡಬೇಡಿ ಅಂದಿದ್ರು. ಆದ್ರೆ ನಮಗೆ ನೋವಾಗಿದೆ. ಹೀಗಾಗಿ ಇಂದು ತುರ್ತು ಸಭೆ ನಡೆಸಬೇಕಾಯಿತು ಎಂದು ಹೇಳಿದ್ದಾರೆ.
ಕಳೆದ 3-4 ತಿಂಗಳಿಂದ ಜೆ.ಪಿ ನಡ್ಡಾ, ಅಮಿತ್ ಶಾ ಭೇಟಿ ಮಾಡಲಾಗ್ತಿಲ್ಲ, ಯತ್ನಾಳ್ ತಂಡ ಭೇಟಿ ಮಾಡಿದ್ದೀವಿ ಅಂತ ಸುಳ್ಳು ಹೇಳಿಕೊಂಡು ಸ್ಟೋರಿಗಳನ್ನು ಪ್ಲಾಂಟ್ ಮಾಡಿಸ್ತಿದ್ದಾರೆ. ಭೇಟಿಯಾದ ಫೋಟೋ ಕೊಡಿ ಅಂದ್ರೆ ಇಲ್ಲ ತೆಗೀಬೇಡಿ ಅಂದಿದ್ದಾರೆ ಅಂತ ಹೇಳ್ತೀರಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ವಿಜಯೇಂದ್ರರನ್ನ ನೀವು ಕುಗ್ಗಿಸಲು ಆಗಲ್ಲ. ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿ ಪಕ್ಷ ಕಟ್ಟಿದ್ರು. ಅದೇ ರೀತಿ ವಿಜಯೇಂದ್ರ ನಾಡಿನ ಯುವಕರ ಕಣ್ಮಣಿ ಆಗಿದ್ದಾರೆ. ಅಂಥವರ ಬಗ್ಗೆ ಮಾತಾಡ್ತೀರ? ಮುಂದಿನ ವಾರ ನಾವು ಮತ್ತೆ ಸಭೆ ಮಾಡ್ತೀವಿ. 100ಕ್ಕೂ ಹೆಚ್ಚು ಜನ ಸೇರಿ ದೊಡ್ಡ ಸಭೆ ಮಾಡ್ತೀವಿ ಎಂದರು.
ರಾಮಮಂದಿರ ವಿರೋಧಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ : ಯೋಗಿ ಆದಿತ್ಯನಾಥ್ ಲಖ್ನೋ(ಉ.ಪ್ರ) : ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು…
ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ…
ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್ಕಾರ್ಟ್ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್ಲೈನ್ನಲ್ಲಿ ಲಕ್ಷಾಂತರ…
ಕೇಂದ್ರದ ಭರವಸೆಯ ಬಳಿಕ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್ನ ಸಾಮಾಜಿಕ ಕಾರ್ಯಕರ್ತ…
ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…
ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ ಬೆಳ್ತಂಗಡಿ,: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು…