ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದು, ಮೊದಲು ಅವರಿಗೆ ನೋಟಿಸ್ ನೀಡಬೇಕು. ವಿಜಯೇಂದ್ರ ಪರ ಕೆಜೆಪಿ ನಾಯಕರು ಮಾತ್ರ ಮಾತನಾಡುತ್ತಿದ್ದು, ಬಿಜೆಪಿ ನಾಯಕರು ಮಾತನಾಡುತ್ತಿಲ್ಲ ಎಂದು ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ವಕ್ಫ್ ಭೂಕಬಳಿಕೆ ವಿರುದ್ಧ ಮಾಡಿದ ಹೋರಾಟದ ವರದಿ ಸಲ್ಲಿಸಲು ದೆಹಲಿಗೆ ಬಂದಿದ್ದು, ಸಹಜವಾಗಿ ಬೇರೆ ವಿಚಾರಗಳ ಬಗ್ಗೆ ಮಾತನಾಡುತ್ತೇವೆ. ವಿಜಯೇಂದ್ರ ಅವರು ಅಧ್ಯಕ್ಷರಾಗಿ ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ನಮಗೆ ಈ ಪರಿಸ್ಥಿತಿ ಬಂತು. ಪಕ್ಷದ ಹಿತದೃಷ್ಟಿಯಿಂದ ವಕ್ಫ್ ಹೋರಾಟ ಮಾಡಿದೆವು ಎಂದು ಸ್ಪಷ್ಟನೆ ನೀಡಿದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ನೋಟಿಸ್ ಕೊಡ್ತಾರಂತೆ ಗೊತ್ತಿತ್ತು. ಯತ್ನಾಳ್ ಅವರು ನೋಟಿಸ್ಗೆ ಉತ್ತರ ಕೊಡುತ್ತಾರೆ. ವಿಜಯೇಂದ್ರ ಅವರಿಗೆ ಯಾವಾಗ ನೋಟಿಸ್ ಕೊಡುತ್ತೀರಿ? ಎಂದು ಪ್ರಶ್ನಿಸಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…