ಬೆಂಗಳೂರು : ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಬಿಜೆಪಿ ಇಂದು ಮಹತ್ವದ ಚಿಂತನಾ ಸಭೆ ನಡೆಸಿದೆ. ಪ್ರತಿಪಕ್ಷ ಕಾಂಗ್ರೆಸ್ ಆ.3ರಂದು ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿರುವ ಬೃಹತ್ ಸಮಾವೇಶಕ್ಕೆ ಪರ್ಯಾಯವಾಗಿ ಬಿಜೆಪಿ ಕೂಡ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿ ಸಮಾವೇಶ ನಡೆಸಬೇಕೆಂಬ ಅಭಿಪ್ರಾಯ ಸಭೆಯಲ್ಲಿ ಕೇಳಿಬಂದಿದೆ.
ದೇವನಹಳ್ಳಿ ಸಮೀಪ ಇರುವ ಜೆಡಬ್ಲ್ಯು ಮ್ಯಾರಿಯೆಟ್ ಪ್ರೆಸ್ಟೀಜ್ ಗಾಲ್ ಶೈರ್ ರೆಸಾರ್ಟ್ನಲ್ಲಿ ಬಿಜೆಪಿ ನಾಯಕರು ಮತ್ತು ಆರ್ಎಸ್ಎಸ್ ಪ್ರಮುಖರನ್ನೊಳಗೊಂಡ ಸಭೆಯಲ್ಲಿ , ಪಕ್ಷ ಸಂಘಟನೆ ಹಾಗೂ ಚುನಾವಣೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಮಾತುಕತೆ ನಡೆಸಲಾಗಿದೆ.
ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ , ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಆರ್ಎಸ್ಎಸ್ ಸಹ ಕಾರ್ಯವಾಹಕ ಮುಕುಂದ್, ಕ್ಷೇತ್ರೀಯ ಸಂಘ ಚಾಲಕ ವಿ.ನಾಗರಾಜ್, ಕ್ಷೇತ್ರೀಯ ಪ್ರಚಾರಕ ಸುೀರ್, ಕ್ಷೇತ್ರೀಯ ಕಾರ್ಯವಾಹ ತಿಪ್ಪೇಸ್ವಾಮಿ ಭಾಗವಹಿಸಿದ್ದರು.
ಸರ್ಕಾರದ ಮೇಲೆ ಕೇಳಿಬಂದಿರುವ ಕೆಲವು ಗಂಭೀರ ಆರೋಪಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದ್ದು, ಪಕ್ಷ ಸಂಘಟನೆ ಹಾಗೂ ಸರ್ಕಾರದ ವರ್ಚಸ್ಸು ಹೆಚ್ಚಿಸುವ ಯೋಜನೆಗಳನ್ನು ಅನುಷ್ಠಾನ ಮಾಡಬೇಕೆಂದು ಸಂಘ ಪರಿವಾರದ ಹಿರಿಯ ನಾಯಕರು ಸಲಹೆ ಮಾಡಿದ್ದಾರೆ.
ಪಕ್ಷ ಹಾಗೂ ಸರ್ಕಾರದ ನಡುವಿನ ಸಮನ್ವಯತೆ, ಸರ್ಕಾರದ ಯೋಜನೆ ಜನರಿಗೆ ತಲುಪಿಸುವಲ್ಲಿ ಕಾರ್ಯಕರ್ತರ ಪಾತ್ರ, ಇತ್ತೀಚಿನ ಚುನಾವಣಾ ಫಲಿತಾಂಶದ ಪರಿಣಾಮ, ಭವಿಷ್ಯದ ಚುನಾವಣೆಗಳಿಗೆ ಪಕ್ಷ ಸನ್ನದ್ದಗೊಳಿಸುವುದು ಸೇರಿದಂತೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಮಹತ್ವದ ಸಮಾಲೋಚನೆ ನಡೆಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…