ಬೆಂಗಳೂರು : ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಬಿಜೆಪಿ ಇಂದು ಮಹತ್ವದ ಚಿಂತನಾ ಸಭೆ ನಡೆಸಿದೆ. ಪ್ರತಿಪಕ್ಷ ಕಾಂಗ್ರೆಸ್ ಆ.3ರಂದು ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿರುವ ಬೃಹತ್ ಸಮಾವೇಶಕ್ಕೆ ಪರ್ಯಾಯವಾಗಿ ಬಿಜೆಪಿ ಕೂಡ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿ ಸಮಾವೇಶ ನಡೆಸಬೇಕೆಂಬ ಅಭಿಪ್ರಾಯ ಸಭೆಯಲ್ಲಿ ಕೇಳಿಬಂದಿದೆ.
ದೇವನಹಳ್ಳಿ ಸಮೀಪ ಇರುವ ಜೆಡಬ್ಲ್ಯು ಮ್ಯಾರಿಯೆಟ್ ಪ್ರೆಸ್ಟೀಜ್ ಗಾಲ್ ಶೈರ್ ರೆಸಾರ್ಟ್ನಲ್ಲಿ ಬಿಜೆಪಿ ನಾಯಕರು ಮತ್ತು ಆರ್ಎಸ್ಎಸ್ ಪ್ರಮುಖರನ್ನೊಳಗೊಂಡ ಸಭೆಯಲ್ಲಿ , ಪಕ್ಷ ಸಂಘಟನೆ ಹಾಗೂ ಚುನಾವಣೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಮಾತುಕತೆ ನಡೆಸಲಾಗಿದೆ.
ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ , ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಆರ್ಎಸ್ಎಸ್ ಸಹ ಕಾರ್ಯವಾಹಕ ಮುಕುಂದ್, ಕ್ಷೇತ್ರೀಯ ಸಂಘ ಚಾಲಕ ವಿ.ನಾಗರಾಜ್, ಕ್ಷೇತ್ರೀಯ ಪ್ರಚಾರಕ ಸುೀರ್, ಕ್ಷೇತ್ರೀಯ ಕಾರ್ಯವಾಹ ತಿಪ್ಪೇಸ್ವಾಮಿ ಭಾಗವಹಿಸಿದ್ದರು.
ಸರ್ಕಾರದ ಮೇಲೆ ಕೇಳಿಬಂದಿರುವ ಕೆಲವು ಗಂಭೀರ ಆರೋಪಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದ್ದು, ಪಕ್ಷ ಸಂಘಟನೆ ಹಾಗೂ ಸರ್ಕಾರದ ವರ್ಚಸ್ಸು ಹೆಚ್ಚಿಸುವ ಯೋಜನೆಗಳನ್ನು ಅನುಷ್ಠಾನ ಮಾಡಬೇಕೆಂದು ಸಂಘ ಪರಿವಾರದ ಹಿರಿಯ ನಾಯಕರು ಸಲಹೆ ಮಾಡಿದ್ದಾರೆ.
ಪಕ್ಷ ಹಾಗೂ ಸರ್ಕಾರದ ನಡುವಿನ ಸಮನ್ವಯತೆ, ಸರ್ಕಾರದ ಯೋಜನೆ ಜನರಿಗೆ ತಲುಪಿಸುವಲ್ಲಿ ಕಾರ್ಯಕರ್ತರ ಪಾತ್ರ, ಇತ್ತೀಚಿನ ಚುನಾವಣಾ ಫಲಿತಾಂಶದ ಪರಿಣಾಮ, ಭವಿಷ್ಯದ ಚುನಾವಣೆಗಳಿಗೆ ಪಕ್ಷ ಸನ್ನದ್ದಗೊಳಿಸುವುದು ಸೇರಿದಂತೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಮಹತ್ವದ ಸಮಾಲೋಚನೆ ನಡೆಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…