ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬರ್ಜರಿ ಗೆಲವು ಸಾಧಿಸಿದ್ದು, ಡಬಲ್ ಇಂಜಿನ್ ಸರ್ಕಾರದಲ್ಲಿದ್ದ ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ಈ ವಿಚಾರದ ಕುರಿತಾಗಿ ಸಂಸದ ಪ್ರತಾಪ್ ಸಿಂಹ ಸೋಶಿಯಲ್ ಮೀಡಿಯಾ ಮೂಲಕವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.
ಟ್ವೀಟ್ನಲ್ಲಿ ಏನಿದೆ?:
ನಮ್ಮ ಪರವಾಗಿ ಮತ ಕೇಳುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ, ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲಿನ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕು ಇರುತ್ತದೆ. ಪಕ್ಷ ಸೋತು ಅನಾಥವಾದಾಗ ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ ಎಂದು ಟ್ವಿಟ್ಟರ್ನಲ್ಲಿ ಬರೆಯುವ ಮೂಲಕವಾಗಿ ಬೇಸರ ಹೊರಹಾಕಿದ್ದಾರೆ.
ಯಾರದ್ದೋ ವೈಯ್ಯಕ್ತಿಕ ಮಹತ್ವಾಕಾಂಕ್ಷೆಯಿಂದ ಸೃಷ್ಟಿಯಾಗುವ ಷಡ್ಯಂತ್ರಕ್ಕೆ ಬಲಿಯಾಗುವುದು, ಯಾರ್ಯಾರನ್ನೋ ತೆಗಳುವುದು ಬೇಡ ಕಾರ್ಯಕರ್ತರೇ ಎಂದು ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ.
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…