Featured

ಪಕ್ಷ ಸೋತು ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತರೇ ಹೊರತು ಯಾವ ನಾಯಕನೂ ಅಲ್ಲ: ಪ್ರತಾಪ್ ಸಿಂಹ – Vishwanews24

ಪಕ್ಷ ಸೋತು ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತರೇ ಹೊರತು ಯಾವ ನಾಯಕನೂ ಅಲ್ಲ: ಪ್ರತಾಪ್ ಸಿಂಹ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ ಬರ್ಜರಿ ಗೆಲವು ಸಾಧಿಸಿದ್ದು, ಡಬಲ್​ ಇಂಜಿನ್​ ಸರ್ಕಾರದಲ್ಲಿದ್ದ ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ಈ ವಿಚಾರದ ಕುರಿತಾಗಿ ಸಂಸದ ಪ್ರತಾಪ್ ಸಿಂಹ ಸೋಶಿಯಲ್​​ ಮೀಡಿಯಾ ಮೂಲಕವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

ಟ್ವೀಟ್​​ನಲ್ಲಿ ಏನಿದೆ?:
ನಮ್ಮ ಪರವಾಗಿ ಮತ ಕೇಳುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ, ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲಿನ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕು ಇರುತ್ತದೆ. ಪಕ್ಷ ಸೋತು ಅನಾಥವಾದಾಗ ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ ಎಂದು ಟ್ವಿಟ್ಟರ್​​ನಲ್ಲಿ ಬರೆಯುವ ಮೂಲಕವಾಗಿ ಬೇಸರ ಹೊರಹಾಕಿದ್ದಾರೆ.

ಯಾರದ್ದೋ ವೈಯ್ಯಕ್ತಿಕ ಮಹತ್ವಾಕಾಂಕ್ಷೆಯಿಂದ ಸೃಷ್ಟಿಯಾಗುವ ಷಡ್ಯಂತ್ರಕ್ಕೆ ಬಲಿಯಾಗುವುದು, ಯಾರ‌್ಯಾರನ್ನೋ ತೆಗಳುವುದು ಬೇಡ ಕಾರ್ಯಕರ್ತರೇ ಎಂದು ಟ್ವೀಟ್​​ ಮಾಡಿ ಮನವಿ ಮಾಡಿದ್ದಾರೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago