Featured

ಪಕ್ಷ ಹಾಗೂ ಸರ್ಕಾರದ ಘನತೆ ಉಳಿಸಲು ನಾಗೇಂದ್ರ ಸ್ವಯಂ ಪ್ರೇರಣೆಯಿಂದ ರಾಜೀನಾಮೆಗೆ ಮುಂದಾಗಿದ್ದಾರೆ : ಡಿಸಿಎಂ – vishwanews24

ಪಕ್ಷ ಹಾಗೂ ಸರ್ಕಾರದ ಘನತೆ ಉಳಿಸಲು ನಾಗೇಂದ್ರ ಸ್ವಯಂ ಪ್ರೇರಣೆಯಿಂದ ರಾಜೀನಾಮೆಗೆ ಮುಂದಾಗಿದ್ದಾರೆ : ಡಿಸಿಎಂ

ಬೆಂಗಳೂರು:  ಪಕ್ಷ ಹಾಗೂ ಸರ್ಕಾರದ ಘನತೆ ಉಳಿಸಲು ನಾಗೇಂದ್ರ ಸ್ವಯಂ ಪ್ರೇರಣೆಯಿಂದ ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು.

ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಆಗ್ರಹಿಸುತ್ತಿರುವ ಬಗ್ಗೆ ಕೇಳಿದಾಗ, ನಾನು, ಗೃಹ ಸಚಿವರು ಸಚಿವ ನಾಗೇಂದ್ರ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ. ಆದರೆ ಪಕ್ಷದ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು ಅವರು ರಾಜೀನಾಮೆ ನೀಡಬಹುದು ಎಂದರು.

ಸರ್ಕಾರ ರಾಜೀನಾಮೆ ಸ್ವೀಕರಿಸಲಿದೆಯೇ ಎಂದು ಕೇಳಿದಾಗ, ಮುಖ್ಯಮಂತ್ರಿಗಳು ಪಕ್ಷದ ಹೈಕಮಾಂಡ್ ಜತೆ ಚರ್ಚೆ ಮಾಡಿ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂದರು.

Vishwa News 24

Recent Posts

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ -vishwanews24

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು,  : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…

15 hours ago

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ -vishwanews24

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…

15 hours ago

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು -vishwanews24

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…

15 hours ago

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು :vishwanews24

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…

17 hours ago

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

2 days ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

2 days ago