ರಾಮನಗರ: ಅನಿತಾ ಕುಮಾರಸ್ವಾಮಿ ಮತ್ತೆ ಸ್ಪರ್ಧೆ ಮಾಡಲ್ಲ, ಪಕ್ಷ ಹೇಳಿದ್ರೆ ನಾನೂ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಶಾಸಕಿ ಅನಿತಾ ಕುಮಾರಸ್ವಾಮಿ ಮತ್ತೆ ಚುನಾವಣೆಗೆ ಸ್ಪರ್ಧೆ ಮಾಡ್ತಾರೆ ಎಂಬ ಚರ್ಚೆ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನಿತಾ ಕುಮಾರಸ್ವಾಮಿಯವರು ಈಗಾಗಲೇ ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ಹಿಂದೆ ಮಧುಗಿರಿ ಹಾಗೂ ರಾಮನಗರದಲ್ಲಿ ಅನಿರೀಕ್ಷಿತವಾಗಿ ಸ್ಪರ್ಧೆ ಮಾಡಿದ್ದರು ಎಂದರು.
ಕಳೆದ ಬಾರಿ ರಾಮನಗರದಿಂದ ಸ್ಪರ್ಧೆಗೆ ನನಗೂ ಒತ್ತಡ ಇತ್ತು. ಆಗ ನಾನು ಸಿನಿಮಾದಲ್ಲಿ ಬ್ಯುಸಿ ಆಗಿದ್ದೆ. ಹಾಗಾಗಿ ಅನಿವಾರ್ಯ ಕಾರಣಗಳಿಂದ ಸ್ಪರ್ಧೆ ಮಾಡಿ ಗೆದ್ದರು. ಬಳಿಕ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸವನ್ನೂ ಮಾಡಿದ್ದಾರೆ. ಮತ್ತೆ ಅವರು ಯಾವುದೇ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ, ಅವರಿಗೆ ಆಸಕ್ತಿಯೂ ಇಲ್ಲ ಎಂದು ಹೇಳಿದರು.
ಎಲ್ಲಾ ಪಕ್ಷದಲ್ಲೂ ಗೊಂದಲಗಳು ಇದ್ದೇ ಇರುತ್ತೆ. ಹಾಸನ ಟಿಕೇಟ್ ವಿಚಾರವಾಗಿ ವರಿಷ್ಠರು ಅಂತಿಮ ನಿರ್ಧಾರ ಮಾಡ್ತಾರೆ. ದೇವೇಗೌಡರು ಜೆಡಿಎಸ್ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಹೋರಾಟದ ಹಿನ್ನೆಲೆಯಲ್ಲಿ ಬಂದ ಪಕ್ಷ ಜೆಡಿಎಸ್ ಪಕ್ಷವನ್ನು ಉಳಿಸಿಕೊಳ್ಳಲು ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಒಂದು ವೇಳೆ ಪಕ್ಷ ಹೇಳಿದ್ರೆ ನಾನೇ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ. ಕಾರ್ಯಕರ್ತರು, ಮುಖಂಡರು ತೀರ್ಮಾನ ಮಾಡಿದ್ರೆ ನಾನು ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ ಎಂದು ಸ್ಪಷ್ಟಪಡಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…