ರಾಮನಗರ: ಅನಿತಾ ಕುಮಾರಸ್ವಾಮಿ ಮತ್ತೆ ಸ್ಪರ್ಧೆ ಮಾಡಲ್ಲ, ಪಕ್ಷ ಹೇಳಿದ್ರೆ ನಾನೂ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಶಾಸಕಿ ಅನಿತಾ ಕುಮಾರಸ್ವಾಮಿ ಮತ್ತೆ ಚುನಾವಣೆಗೆ ಸ್ಪರ್ಧೆ ಮಾಡ್ತಾರೆ ಎಂಬ ಚರ್ಚೆ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನಿತಾ ಕುಮಾರಸ್ವಾಮಿಯವರು ಈಗಾಗಲೇ ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ಹಿಂದೆ ಮಧುಗಿರಿ ಹಾಗೂ ರಾಮನಗರದಲ್ಲಿ ಅನಿರೀಕ್ಷಿತವಾಗಿ ಸ್ಪರ್ಧೆ ಮಾಡಿದ್ದರು ಎಂದರು.
ಕಳೆದ ಬಾರಿ ರಾಮನಗರದಿಂದ ಸ್ಪರ್ಧೆಗೆ ನನಗೂ ಒತ್ತಡ ಇತ್ತು. ಆಗ ನಾನು ಸಿನಿಮಾದಲ್ಲಿ ಬ್ಯುಸಿ ಆಗಿದ್ದೆ. ಹಾಗಾಗಿ ಅನಿವಾರ್ಯ ಕಾರಣಗಳಿಂದ ಸ್ಪರ್ಧೆ ಮಾಡಿ ಗೆದ್ದರು. ಬಳಿಕ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸವನ್ನೂ ಮಾಡಿದ್ದಾರೆ. ಮತ್ತೆ ಅವರು ಯಾವುದೇ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ, ಅವರಿಗೆ ಆಸಕ್ತಿಯೂ ಇಲ್ಲ ಎಂದು ಹೇಳಿದರು.
ಎಲ್ಲಾ ಪಕ್ಷದಲ್ಲೂ ಗೊಂದಲಗಳು ಇದ್ದೇ ಇರುತ್ತೆ. ಹಾಸನ ಟಿಕೇಟ್ ವಿಚಾರವಾಗಿ ವರಿಷ್ಠರು ಅಂತಿಮ ನಿರ್ಧಾರ ಮಾಡ್ತಾರೆ. ದೇವೇಗೌಡರು ಜೆಡಿಎಸ್ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಹೋರಾಟದ ಹಿನ್ನೆಲೆಯಲ್ಲಿ ಬಂದ ಪಕ್ಷ ಜೆಡಿಎಸ್ ಪಕ್ಷವನ್ನು ಉಳಿಸಿಕೊಳ್ಳಲು ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಒಂದು ವೇಳೆ ಪಕ್ಷ ಹೇಳಿದ್ರೆ ನಾನೇ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ. ಕಾರ್ಯಕರ್ತರು, ಮುಖಂಡರು ತೀರ್ಮಾನ ಮಾಡಿದ್ರೆ ನಾನು ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ ಎಂದು ಸ್ಪಷ್ಟಪಡಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…