Categories: Featuredದೇಶ

ಪಟಾಕಿಗಳು ತುಂಬಿದ್ದ ಅನಾನಸನ್ನು ಗರ್ಭಿಣಿ ಆನೆಯೊಂದಕ್ಕೆ ನೀಡಿದ್ದು, ಅದು ಸ್ಫೋಟಗೊಂಡ ಪರಿಣಾಮ ಗರ್ಭಿಣಿ ಆನೆ ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ.vishwanews24

ಕೊಚ್ಚಿ ( ವಾಭಾ): ಸ್ಥಳೀಯ ಜನರು ಪಟಾಕಿಗಳು ತುಂಬಿದ್ದ ಅನಾನಸನ್ನು ಗರ್ಭಿಣಿ ಆನೆಯೊಂದಕ್ಕೆ ನೀಡಿದ್ದು, ಅದು ಸ್ಫೋಟಗೊಂಡ ಪರಿಣಾಮ ಗರ್ಭಿಣಿ ಆನೆ ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ. ಆನೆ ಅನಾನಸು ತಿನ್ನುತ್ತಿದ್ದಾಗ ಪಟಾಕಿ ಸ್ಫೋಟಗೊಂಡಿದ್ದು, ಗಂಭೀರ ಗಾಯಗಳಾಗಿತ್ತು ಎಂದು ತಿಳಿದುಬಂದಿದೆ.

ಮಲಪ್ಪುರಂ ಜಿಲ್ಲೆಯ ಅರಣ್ಯಾಧಿಕಾರಿಯೊಬ್ಬರು ಈ ಬಗ್ಗೆ ಫೇಸ್ ಬುಕ್ ಪೋಸ್ಟ್ ಹಾಕಿದ ನಂತರ ಘಟನೆ ಬೆಳಕಿಗೆ ಬಂದಿದೆ.

ಆಹಾರ ಅರಸಿ ಕಾಡಿನಿಂದ ಬಂದಿದ್ದ ಗರ್ಭಿಣಿ ಆನೆ ಸ್ಥಳೀಯ ಗ್ರಾಮಕ್ಕೆ ಬಂದಿತ್ತು. ಅದು ಗ್ರಾಮದ ಬೀದಿಯಲ್ಲಿ ನಡೆಯುತ್ತಿರುವಾಗ ಕೆಲ ಕಿಡಿಗೇಡಿಗಳು ಪಟಾಕಿ ತುಂಬಿದ್ದ ಅನಾನಸು ನೀಡಿದ್ದರು.

‘ಆಕೆ ಎಲ್ಲರನ್ನೂ ನಂಬಿದ್ದಳು. ಆಕೆ ಅನಾನಸು ತಿಂದಾಗ ಅದು ಸ್ಫೋಟಗೊಂಡಿತ್ತು. ಆಕೆ ತನ್ನ ಬಗ್ಗೆ ಯೋಚಿಸಿ ಆಘಾತಗೊಂಡಿರಲಿಕ್ಕಿಲ್ಲ. ಆದರೆ ಜನ್ಮ ನೀಡಬೇಕಿದ್ದ 18 -20 ತಿಂಗಳ ಮಗುವನ್ನು ನೆನೆದು ಆಘಾತಗೊಂಡಿರಬಹುದು’ ಎಂದು ಅರಣ್ಯಾಧಿಕಾರಿ ಮೋಹನ್ ಕೃಷ್ಣನ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ಸ್ಫೋಟದ ತೀವ್ರತೆಗೆ ಆನೆಯ ಬಾಯಿ ಮತ್ತು ನಾಲಗೆಗೆ ಗಂಭೀರ ಗಾಯಗಳಾಗಿತ್ತು. ಹಸಿವು ಮತ್ತು ನೋವಿನಿಂದ ಆನೆ ಗ್ರಾಮವಿಡೀ ನಡೆದಿತ್ತು. ಗಂಭೀರ ಗಾಯಗಳ ಕಾರಣ ಏನನ್ನೂ ತಿನ್ನಲು ಕೂಡ ಸಾಧ್ಯವಾಗುತ್ತಿರಲಿಲ್ಲ.

‘ನೋವಿನಿಂದ ಚಡಪಡಿಸಿ ಆಕೆ ಗ್ರಾಮವಿಡೀ ಓಡಿದರೂ ಯಾರಿಗೂ ಹಾನಿ ಮಾಡಿಲ್ಲ. ಯಾವುದೇ ಮನೆಗಳ ಮೇಲೆ ದಾಳಿ ಮಾಡಿಲ್ಲ’ ಎಂದವರು ಹೇಳಿದ್ದಾರೆ.

ನಂತರ ವೆಲ್ಲಿಯಾರ್ ನದಿಗಿಳಿದ ಆನೆ ನೀರಿನಲ್ಲಿ ನಿಂತಿದ್ದು, ಅದರ ಫೋಟೊಗಳು ವೈರಲ್ ಆಗಿವೆ. ನೋವಿನಿಂದ ಸ್ವಲ್ಪವಾದರೂ ಮುಕ್ತಿ ಪಡೆಯಲು ಆನೆ ಈ ರೀತಿ ಮಾಡಿರಬಹುದು ಎನ್ನಲಾಗಿದೆ. ಗಾಯಗಳ ಮೇಲೆ ಕ್ರಿಮಿ, ಕೀಟಗಳ ದಾಳಿಯಿಂದ ಪಾರಾಗಲು ಈ ರೀತಿ ಮಾಡಿದೆ ಎಂದು ಅರಣ್ಯಾಧಿಕಾರಿ ಹೇಳುತ್ತಾರೆ.

ನದಿ ನೀರಿನಿಂದ ಆನೆಯನ್ನು ಹೊರತರಲು ಇನ್ನೆರಡು ಆನೆಗಳನ್ನು ಸ್ಥಳಕ್ಕೆ ಕರೆತರಲಾಯಿತು. ಆದರೆ ಏನನ್ನೂ ಮಾಡಲು ಗಾಯಾಳು ಆನೆ ಬಿಡಲಿಲ್ಲ. ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿದರೂ ಮೇ 27ರಂದು ಸಂಜೆ 4 ಗಂಟೆಗೆ ಗರ್ಭಿಣಿ ಆನೆ ನದಿ ನೀರಲ್ಲಿ ನಿಂತಲ್ಲೇ ಪ್ರಾಣ ಕಳೆದುಕೊಂಡಿತು.

ನಂತರ ಆನೆಯ ಮೃತದೇಹವನ್ನು ಟ್ರಕ್ ನಲ್ಲಿ ಸಾಗಿಸಿ ಅಂತ್ಯಕ್ರಿಯೆ ನಡೆಸಲಾಗಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

14 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

15 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

15 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

16 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

17 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

17 hours ago