Categories: Featuredದೇಶ

ಪಟಾಕಿಗಳು ತುಂಬಿದ್ದ ಅನಾನಸನ್ನು ಗರ್ಭಿಣಿ ಆನೆಯೊಂದಕ್ಕೆ ನೀಡಿದ್ದು, ಅದು ಸ್ಫೋಟಗೊಂಡ ಪರಿಣಾಮ ಗರ್ಭಿಣಿ ಆನೆ ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ.vishwanews24

ಕೊಚ್ಚಿ ( ವಾಭಾ): ಸ್ಥಳೀಯ ಜನರು ಪಟಾಕಿಗಳು ತುಂಬಿದ್ದ ಅನಾನಸನ್ನು ಗರ್ಭಿಣಿ ಆನೆಯೊಂದಕ್ಕೆ ನೀಡಿದ್ದು, ಅದು ಸ್ಫೋಟಗೊಂಡ ಪರಿಣಾಮ ಗರ್ಭಿಣಿ ಆನೆ ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ. ಆನೆ ಅನಾನಸು ತಿನ್ನುತ್ತಿದ್ದಾಗ ಪಟಾಕಿ ಸ್ಫೋಟಗೊಂಡಿದ್ದು, ಗಂಭೀರ ಗಾಯಗಳಾಗಿತ್ತು ಎಂದು ತಿಳಿದುಬಂದಿದೆ.

ಮಲಪ್ಪುರಂ ಜಿಲ್ಲೆಯ ಅರಣ್ಯಾಧಿಕಾರಿಯೊಬ್ಬರು ಈ ಬಗ್ಗೆ ಫೇಸ್ ಬುಕ್ ಪೋಸ್ಟ್ ಹಾಕಿದ ನಂತರ ಘಟನೆ ಬೆಳಕಿಗೆ ಬಂದಿದೆ.

ಆಹಾರ ಅರಸಿ ಕಾಡಿನಿಂದ ಬಂದಿದ್ದ ಗರ್ಭಿಣಿ ಆನೆ ಸ್ಥಳೀಯ ಗ್ರಾಮಕ್ಕೆ ಬಂದಿತ್ತು. ಅದು ಗ್ರಾಮದ ಬೀದಿಯಲ್ಲಿ ನಡೆಯುತ್ತಿರುವಾಗ ಕೆಲ ಕಿಡಿಗೇಡಿಗಳು ಪಟಾಕಿ ತುಂಬಿದ್ದ ಅನಾನಸು ನೀಡಿದ್ದರು.

‘ಆಕೆ ಎಲ್ಲರನ್ನೂ ನಂಬಿದ್ದಳು. ಆಕೆ ಅನಾನಸು ತಿಂದಾಗ ಅದು ಸ್ಫೋಟಗೊಂಡಿತ್ತು. ಆಕೆ ತನ್ನ ಬಗ್ಗೆ ಯೋಚಿಸಿ ಆಘಾತಗೊಂಡಿರಲಿಕ್ಕಿಲ್ಲ. ಆದರೆ ಜನ್ಮ ನೀಡಬೇಕಿದ್ದ 18 -20 ತಿಂಗಳ ಮಗುವನ್ನು ನೆನೆದು ಆಘಾತಗೊಂಡಿರಬಹುದು’ ಎಂದು ಅರಣ್ಯಾಧಿಕಾರಿ ಮೋಹನ್ ಕೃಷ್ಣನ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ಸ್ಫೋಟದ ತೀವ್ರತೆಗೆ ಆನೆಯ ಬಾಯಿ ಮತ್ತು ನಾಲಗೆಗೆ ಗಂಭೀರ ಗಾಯಗಳಾಗಿತ್ತು. ಹಸಿವು ಮತ್ತು ನೋವಿನಿಂದ ಆನೆ ಗ್ರಾಮವಿಡೀ ನಡೆದಿತ್ತು. ಗಂಭೀರ ಗಾಯಗಳ ಕಾರಣ ಏನನ್ನೂ ತಿನ್ನಲು ಕೂಡ ಸಾಧ್ಯವಾಗುತ್ತಿರಲಿಲ್ಲ.

‘ನೋವಿನಿಂದ ಚಡಪಡಿಸಿ ಆಕೆ ಗ್ರಾಮವಿಡೀ ಓಡಿದರೂ ಯಾರಿಗೂ ಹಾನಿ ಮಾಡಿಲ್ಲ. ಯಾವುದೇ ಮನೆಗಳ ಮೇಲೆ ದಾಳಿ ಮಾಡಿಲ್ಲ’ ಎಂದವರು ಹೇಳಿದ್ದಾರೆ.

ನಂತರ ವೆಲ್ಲಿಯಾರ್ ನದಿಗಿಳಿದ ಆನೆ ನೀರಿನಲ್ಲಿ ನಿಂತಿದ್ದು, ಅದರ ಫೋಟೊಗಳು ವೈರಲ್ ಆಗಿವೆ. ನೋವಿನಿಂದ ಸ್ವಲ್ಪವಾದರೂ ಮುಕ್ತಿ ಪಡೆಯಲು ಆನೆ ಈ ರೀತಿ ಮಾಡಿರಬಹುದು ಎನ್ನಲಾಗಿದೆ. ಗಾಯಗಳ ಮೇಲೆ ಕ್ರಿಮಿ, ಕೀಟಗಳ ದಾಳಿಯಿಂದ ಪಾರಾಗಲು ಈ ರೀತಿ ಮಾಡಿದೆ ಎಂದು ಅರಣ್ಯಾಧಿಕಾರಿ ಹೇಳುತ್ತಾರೆ.

ನದಿ ನೀರಿನಿಂದ ಆನೆಯನ್ನು ಹೊರತರಲು ಇನ್ನೆರಡು ಆನೆಗಳನ್ನು ಸ್ಥಳಕ್ಕೆ ಕರೆತರಲಾಯಿತು. ಆದರೆ ಏನನ್ನೂ ಮಾಡಲು ಗಾಯಾಳು ಆನೆ ಬಿಡಲಿಲ್ಲ. ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿದರೂ ಮೇ 27ರಂದು ಸಂಜೆ 4 ಗಂಟೆಗೆ ಗರ್ಭಿಣಿ ಆನೆ ನದಿ ನೀರಲ್ಲಿ ನಿಂತಲ್ಲೇ ಪ್ರಾಣ ಕಳೆದುಕೊಂಡಿತು.

ನಂತರ ಆನೆಯ ಮೃತದೇಹವನ್ನು ಟ್ರಕ್ ನಲ್ಲಿ ಸಾಗಿಸಿ ಅಂತ್ಯಕ್ರಿಯೆ ನಡೆಸಲಾಗಿದೆ.

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

1 day ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

1 day ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

1 day ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

1 day ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

1 day ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

1 day ago