ಲಕ್ನೋ,: ಗಾಳಿಯ ಗುಣಮಟ್ಟ ಕಳಪೆ ದರ್ಜೆಯಲ್ಲಿರುವ ಹಿನ್ನೆಲೆ ರಾಷ್ಟ್ರೀಯ ರಾಜಧಾನಿ ಪ್ರದೇಶ ಹಾಗೂ ಇತರ ಪ್ರದೇಶಗಳಲ್ಲಿ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರ ನಿಷೇಧಿಸಿರುವುದಾಗಿ ತಿಳಿಸಿದೆ.
ಗಾಳಿಯ ಗುಣಮಟ್ಟ ಉತ್ತಮಗೊಳಿಸಿವ ಸಲುವಾಗಿ ಪಟಾಕಿ ಬಳಕೆಯನ್ನು ನಿಷೇಧಿಸಲಾಗಿದೆ. ಆದರೆ, ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಬಳಕೆ ಮಾಡಲು ಅನುಮತಿ ನೀಡಿರುವುದಾಗಿ ಉತ್ತರಪ್ರದೇಶ ಗೃಹ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಹೆಚ್ಚುವರಿ ಮುಖ್ಯ ಗೃಹ ಕಾರ್ಯದರ್ಶಿ ಅವ್ನೀಶ್ ಕುಮಾರ್ ಅವಾಸ್ಥಿ, “ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾದಿಕಾರಿಗಳಿಗೆ, ಹಸಿರು ಪಟಾಕಿ ಮಾರಾಟ ಹಾಗೂ ಬಳಕೆಗೆ ಸಂಬಂಧಪಟ್ಟಂತೆ ಎಲ್ಲಾ ವಿವರವಾದ ಮಾರ್ಗಸೂಚಿಗಳನ್ನು ಕಳುಹಿಸಲಾಗಿದೆ” ಎಂದು ಹೇಳಿದ್ದಾರೆ.
“ಎರಡು ಗಂಟೆಗಳಿಗಿಂತ ಹೆಚ್ಚು ಹಸಿರು ಪಟಾಕಿಗಳನ್ನು ಸಿಡಿಸುವಂತಿಲ್ಲ. ಕ್ರಿಸ್ಮಸ್ ಹಾಗೂ ಹೊಸ ವರ್ಷದ ಆರಂಭದಲ್ಲಿಯೂ ಕೂಡಾ 11.55ರ ರಾತ್ರಿಯಿಂದ 12.30ರವರೆಗೆ ಮಾತ್ರವೇ ಪಟಾಕಿ ಸಿಡಿಸಲು ಅವಕಾಶ ಕಲ್ಪಿಸಲಾಗಿದೆ” ಎಂದಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…