ಲಕ್ನೋ,: ಗಾಳಿಯ ಗುಣಮಟ್ಟ ಕಳಪೆ ದರ್ಜೆಯಲ್ಲಿರುವ ಹಿನ್ನೆಲೆ ರಾಷ್ಟ್ರೀಯ ರಾಜಧಾನಿ ಪ್ರದೇಶ ಹಾಗೂ ಇತರ ಪ್ರದೇಶಗಳಲ್ಲಿ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರ ನಿಷೇಧಿಸಿರುವುದಾಗಿ ತಿಳಿಸಿದೆ.
ಗಾಳಿಯ ಗುಣಮಟ್ಟ ಉತ್ತಮಗೊಳಿಸಿವ ಸಲುವಾಗಿ ಪಟಾಕಿ ಬಳಕೆಯನ್ನು ನಿಷೇಧಿಸಲಾಗಿದೆ. ಆದರೆ, ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಬಳಕೆ ಮಾಡಲು ಅನುಮತಿ ನೀಡಿರುವುದಾಗಿ ಉತ್ತರಪ್ರದೇಶ ಗೃಹ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಹೆಚ್ಚುವರಿ ಮುಖ್ಯ ಗೃಹ ಕಾರ್ಯದರ್ಶಿ ಅವ್ನೀಶ್ ಕುಮಾರ್ ಅವಾಸ್ಥಿ, “ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾದಿಕಾರಿಗಳಿಗೆ, ಹಸಿರು ಪಟಾಕಿ ಮಾರಾಟ ಹಾಗೂ ಬಳಕೆಗೆ ಸಂಬಂಧಪಟ್ಟಂತೆ ಎಲ್ಲಾ ವಿವರವಾದ ಮಾರ್ಗಸೂಚಿಗಳನ್ನು ಕಳುಹಿಸಲಾಗಿದೆ” ಎಂದು ಹೇಳಿದ್ದಾರೆ.
“ಎರಡು ಗಂಟೆಗಳಿಗಿಂತ ಹೆಚ್ಚು ಹಸಿರು ಪಟಾಕಿಗಳನ್ನು ಸಿಡಿಸುವಂತಿಲ್ಲ. ಕ್ರಿಸ್ಮಸ್ ಹಾಗೂ ಹೊಸ ವರ್ಷದ ಆರಂಭದಲ್ಲಿಯೂ ಕೂಡಾ 11.55ರ ರಾತ್ರಿಯಿಂದ 12.30ರವರೆಗೆ ಮಾತ್ರವೇ ಪಟಾಕಿ ಸಿಡಿಸಲು ಅವಕಾಶ ಕಲ್ಪಿಸಲಾಗಿದೆ” ಎಂದಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…