Featured

ಪಠ್ಯದಿಂದ ಟಿಪ್ಪು ಪಾಠ ತೆಗೆಯುವುದು ಇತಿಹಾಸಕ್ಕೆ ಮೋಸ ಮಾಡಿದಂತೆ : ಇತಿಹಾಸ ತಜ್ಞೆ ಡಾ.ವಸುಂಧರಾ ಫಿಲಿಯೋಜಾ -Vishwanews24

ಮೈಸೂರು: ‘ಪಠ್ಯದಿಂದ ಟಿಪ್ಪು ಪಾಠ ತೆಗೆಯುವುದು ಇತಿಹಾಸಕ್ಕೆ ಮೋಸ ಮಾಡಿದಂತೆ’ ಎಂದು ಇತಿಹಾಸ ತಜ್ಞೆ ಡಾ.ವಸುಂಧರಾ ಫಿಲಿಯೋಜಾ ತಿಳಿಸಿದರು.

ಕರ್ನಾಟಕ ಇತಿಹಾಸ ಅಕಾಡೆಮಿಯು ಮೈಸೂರಿನ ಸ್ವಗೃಹದಲ್ಲಿ ಸೋಮವಾರ ನೀಡಿದ ‘ಇತಿಹಾಸ ಸಂಸ್ಕೃತಿ ಶ್ರೀ’ ಪ್ರಶಸ್ತಿ ಹಾಗೂ ₹ 1 ಲಕ್ಷ ನಗದು ಸ್ವೀಕರಿಸಿ ಮಾತನಾಡಿದರು.

‘ಹಂಪಿಯನ್ನು 1790ರ ಆಸುಪಾಸಿನಲ್ಲಿ ಬ್ರಿಟಿಷರು ಯಾವ ರಾಜ್ಯಕ್ಕೆ ಸೇರ್ಪಡೆಗೊಳಿಸಬೇಕು ಎಂಬ ವಿಷಯ ಪ್ರಸ್ತಾಪಿಸಿದಾಗ, ಮರಾಠಿಗರು ಮಹಾರಾಷ್ಟ್ರಕ್ಕೆ ಸೇರ್ಪಡೆಗೊಳಿಸುವಂತೆ, ಹೈದರಾಬಾದಿನ ನಿಜಾಮರು ತಮ್ಮ ರಾಜ್ಯಕ್ಕೆ ಸೇರ್ಪಡೆಗೊಳಿಸಿ ಎಂದು ಪ್ರಬಲ ಹಕ್ಕೊತ್ತಾಯ ಮಂಡಿಸಿದ್ದರು. ಆಗ ಶ್ರೀರಂಗಪಟ್ಟಣದ ಅರಸನಾಗಿದ್ದ ಟಿಪ್ಪು ಸುಲ್ತಾನ್, ಹಂಪಿ ಕರ್ಣಾಟಕ ರಾಜ್ಯಕ್ಕೆ ಸೇರಬೇಕು ಎಂದು ಪ್ರಬಲ ಹಕ್ಕೊತ್ತಾಯದ ಜತೆಗೆ ಹಟ ಹಿಡಿದ ಪರಿಣಾಮ ಶತಮಾನಗಳಿಂದಲೂ ಹಂಪಿ ಕರ್ನಾಟಕದಲ್ಲೇ ಉಳಿದುಕೊಳ್ಳಲು ಸಾಧ್ಯವಾಯಿತು. ಇದನ್ನು ಬ್ರಿಟಿಷ್ ಲೇಖಕರು ತಮ್ಮ ಕೃತಿಗಳಲ್ಲಿ ದಾಖಲಿಸಿದ್ದಾರೆ’ ಎಂದು ತಿಳಿಸಿದರು.

‘ಟಿಪ್ಪು ಅರಸನಾಗುವ ಮುನ್ನ ಶ್ರೀರಂಗಪಟ್ಟಣದಲ್ಲಿ ಬ್ರಿಟಿಷರು ಮೆರೆದ ಅಟ್ಟಹಾಸ, ದೌರ್ಜನ್ಯಕ್ಕೆ ಲೆಕ್ಕವಿಲ್ಲ. ಇದನ್ನು ಕೊನೆಗಾಣಿಸಿದವ ಟಿಪ್ಪು. ಆದರೆ, ಎಲ್ಲಿಯೂ ಬ್ರಿಟಿಷರ ಕ್ರೂರತೆ ದಾಖಲಾಗಿಲ್ಲ. ಟಿಪ್ಪು ಅನೇಕ ಒಳ್ಳೆಯ ಕೆಲಸ ಮಾಡಿದ್ದಾನೆ, ಕೆಟ್ಟದ್ದನ್ನೂ ಮಾಡಿದ್ದಾನೆ. ಈ ಎರಡನ್ನೂ ದಾಖಲಿಸುವುದು, ನೈಜ ಇತಿಹಾಸವನ್ನು ಮುಂದಿನ ಪೀಳಿಗೆಗೆ ನೀಡುವುದು ಇತಿಹಾಸಕಾರರ ಆದ್ಯ ಕರ್ತವ್ಯವಾಗಬೇಕಿದೆ’ ಎಂದು ನುಡಿದರು.

 

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

13 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

14 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

14 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

15 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

16 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

16 hours ago