ಮೈಸೂರು: ‘ಪಠ್ಯದಿಂದ ಟಿಪ್ಪು ಪಾಠ ತೆಗೆಯುವುದು ಇತಿಹಾಸಕ್ಕೆ ಮೋಸ ಮಾಡಿದಂತೆ’ ಎಂದು ಇತಿಹಾಸ ತಜ್ಞೆ ಡಾ.ವಸುಂಧರಾ ಫಿಲಿಯೋಜಾ ತಿಳಿಸಿದರು.
ಕರ್ನಾಟಕ ಇತಿಹಾಸ ಅಕಾಡೆಮಿಯು ಮೈಸೂರಿನ ಸ್ವಗೃಹದಲ್ಲಿ ಸೋಮವಾರ ನೀಡಿದ ‘ಇತಿಹಾಸ ಸಂಸ್ಕೃತಿ ಶ್ರೀ’ ಪ್ರಶಸ್ತಿ ಹಾಗೂ ₹ 1 ಲಕ್ಷ ನಗದು ಸ್ವೀಕರಿಸಿ ಮಾತನಾಡಿದರು.
‘ಹಂಪಿಯನ್ನು 1790ರ ಆಸುಪಾಸಿನಲ್ಲಿ ಬ್ರಿಟಿಷರು ಯಾವ ರಾಜ್ಯಕ್ಕೆ ಸೇರ್ಪಡೆಗೊಳಿಸಬೇಕು ಎಂಬ ವಿಷಯ ಪ್ರಸ್ತಾಪಿಸಿದಾಗ, ಮರಾಠಿಗರು ಮಹಾರಾಷ್ಟ್ರಕ್ಕೆ ಸೇರ್ಪಡೆಗೊಳಿಸುವಂತೆ, ಹೈದರಾಬಾದಿನ ನಿಜಾಮರು ತಮ್ಮ ರಾಜ್ಯಕ್ಕೆ ಸೇರ್ಪಡೆಗೊಳಿಸಿ ಎಂದು ಪ್ರಬಲ ಹಕ್ಕೊತ್ತಾಯ ಮಂಡಿಸಿದ್ದರು. ಆಗ ಶ್ರೀರಂಗಪಟ್ಟಣದ ಅರಸನಾಗಿದ್ದ ಟಿಪ್ಪು ಸುಲ್ತಾನ್, ಹಂಪಿ ಕರ್ಣಾಟಕ ರಾಜ್ಯಕ್ಕೆ ಸೇರಬೇಕು ಎಂದು ಪ್ರಬಲ ಹಕ್ಕೊತ್ತಾಯದ ಜತೆಗೆ ಹಟ ಹಿಡಿದ ಪರಿಣಾಮ ಶತಮಾನಗಳಿಂದಲೂ ಹಂಪಿ ಕರ್ನಾಟಕದಲ್ಲೇ ಉಳಿದುಕೊಳ್ಳಲು ಸಾಧ್ಯವಾಯಿತು. ಇದನ್ನು ಬ್ರಿಟಿಷ್ ಲೇಖಕರು ತಮ್ಮ ಕೃತಿಗಳಲ್ಲಿ ದಾಖಲಿಸಿದ್ದಾರೆ’ ಎಂದು ತಿಳಿಸಿದರು.
‘ಟಿಪ್ಪು ಅರಸನಾಗುವ ಮುನ್ನ ಶ್ರೀರಂಗಪಟ್ಟಣದಲ್ಲಿ ಬ್ರಿಟಿಷರು ಮೆರೆದ ಅಟ್ಟಹಾಸ, ದೌರ್ಜನ್ಯಕ್ಕೆ ಲೆಕ್ಕವಿಲ್ಲ. ಇದನ್ನು ಕೊನೆಗಾಣಿಸಿದವ ಟಿಪ್ಪು. ಆದರೆ, ಎಲ್ಲಿಯೂ ಬ್ರಿಟಿಷರ ಕ್ರೂರತೆ ದಾಖಲಾಗಿಲ್ಲ. ಟಿಪ್ಪು ಅನೇಕ ಒಳ್ಳೆಯ ಕೆಲಸ ಮಾಡಿದ್ದಾನೆ, ಕೆಟ್ಟದ್ದನ್ನೂ ಮಾಡಿದ್ದಾನೆ. ಈ ಎರಡನ್ನೂ ದಾಖಲಿಸುವುದು, ನೈಜ ಇತಿಹಾಸವನ್ನು ಮುಂದಿನ ಪೀಳಿಗೆಗೆ ನೀಡುವುದು ಇತಿಹಾಸಕಾರರ ಆದ್ಯ ಕರ್ತವ್ಯವಾಗಬೇಕಿದೆ’ ಎಂದು ನುಡಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…