ಮೈಸೂರು: ‘ಪಠ್ಯದಿಂದ ಟಿಪ್ಪು ಪಾಠ ತೆಗೆಯುವುದು ಇತಿಹಾಸಕ್ಕೆ ಮೋಸ ಮಾಡಿದಂತೆ’ ಎಂದು ಇತಿಹಾಸ ತಜ್ಞೆ ಡಾ.ವಸುಂಧರಾ ಫಿಲಿಯೋಜಾ ತಿಳಿಸಿದರು.
ಕರ್ನಾಟಕ ಇತಿಹಾಸ ಅಕಾಡೆಮಿಯು ಮೈಸೂರಿನ ಸ್ವಗೃಹದಲ್ಲಿ ಸೋಮವಾರ ನೀಡಿದ ‘ಇತಿಹಾಸ ಸಂಸ್ಕೃತಿ ಶ್ರೀ’ ಪ್ರಶಸ್ತಿ ಹಾಗೂ ₹ 1 ಲಕ್ಷ ನಗದು ಸ್ವೀಕರಿಸಿ ಮಾತನಾಡಿದರು.
‘ಹಂಪಿಯನ್ನು 1790ರ ಆಸುಪಾಸಿನಲ್ಲಿ ಬ್ರಿಟಿಷರು ಯಾವ ರಾಜ್ಯಕ್ಕೆ ಸೇರ್ಪಡೆಗೊಳಿಸಬೇಕು ಎಂಬ ವಿಷಯ ಪ್ರಸ್ತಾಪಿಸಿದಾಗ, ಮರಾಠಿಗರು ಮಹಾರಾಷ್ಟ್ರಕ್ಕೆ ಸೇರ್ಪಡೆಗೊಳಿಸುವಂತೆ, ಹೈದರಾಬಾದಿನ ನಿಜಾಮರು ತಮ್ಮ ರಾಜ್ಯಕ್ಕೆ ಸೇರ್ಪಡೆಗೊಳಿಸಿ ಎಂದು ಪ್ರಬಲ ಹಕ್ಕೊತ್ತಾಯ ಮಂಡಿಸಿದ್ದರು. ಆಗ ಶ್ರೀರಂಗಪಟ್ಟಣದ ಅರಸನಾಗಿದ್ದ ಟಿಪ್ಪು ಸುಲ್ತಾನ್, ಹಂಪಿ ಕರ್ಣಾಟಕ ರಾಜ್ಯಕ್ಕೆ ಸೇರಬೇಕು ಎಂದು ಪ್ರಬಲ ಹಕ್ಕೊತ್ತಾಯದ ಜತೆಗೆ ಹಟ ಹಿಡಿದ ಪರಿಣಾಮ ಶತಮಾನಗಳಿಂದಲೂ ಹಂಪಿ ಕರ್ನಾಟಕದಲ್ಲೇ ಉಳಿದುಕೊಳ್ಳಲು ಸಾಧ್ಯವಾಯಿತು. ಇದನ್ನು ಬ್ರಿಟಿಷ್ ಲೇಖಕರು ತಮ್ಮ ಕೃತಿಗಳಲ್ಲಿ ದಾಖಲಿಸಿದ್ದಾರೆ’ ಎಂದು ತಿಳಿಸಿದರು.
‘ಟಿಪ್ಪು ಅರಸನಾಗುವ ಮುನ್ನ ಶ್ರೀರಂಗಪಟ್ಟಣದಲ್ಲಿ ಬ್ರಿಟಿಷರು ಮೆರೆದ ಅಟ್ಟಹಾಸ, ದೌರ್ಜನ್ಯಕ್ಕೆ ಲೆಕ್ಕವಿಲ್ಲ. ಇದನ್ನು ಕೊನೆಗಾಣಿಸಿದವ ಟಿಪ್ಪು. ಆದರೆ, ಎಲ್ಲಿಯೂ ಬ್ರಿಟಿಷರ ಕ್ರೂರತೆ ದಾಖಲಾಗಿಲ್ಲ. ಟಿಪ್ಪು ಅನೇಕ ಒಳ್ಳೆಯ ಕೆಲಸ ಮಾಡಿದ್ದಾನೆ, ಕೆಟ್ಟದ್ದನ್ನೂ ಮಾಡಿದ್ದಾನೆ. ಈ ಎರಡನ್ನೂ ದಾಖಲಿಸುವುದು, ನೈಜ ಇತಿಹಾಸವನ್ನು ಮುಂದಿನ ಪೀಳಿಗೆಗೆ ನೀಡುವುದು ಇತಿಹಾಸಕಾರರ ಆದ್ಯ ಕರ್ತವ್ಯವಾಗಬೇಕಿದೆ’ ಎಂದು ನುಡಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…