Featured

ಪಠ್ಯದಿಂದ ಟಿಪ್ಪು ಪಾಠ ತೆಗೆಯುವುದು ಇತಿಹಾಸಕ್ಕೆ ಮೋಸ ಮಾಡಿದಂತೆ : ಇತಿಹಾಸ ತಜ್ಞೆ ಡಾ.ವಸುಂಧರಾ ಫಿಲಿಯೋಜಾ -Vishwanews24

ಮೈಸೂರು: ‘ಪಠ್ಯದಿಂದ ಟಿಪ್ಪು ಪಾಠ ತೆಗೆಯುವುದು ಇತಿಹಾಸಕ್ಕೆ ಮೋಸ ಮಾಡಿದಂತೆ’ ಎಂದು ಇತಿಹಾಸ ತಜ್ಞೆ ಡಾ.ವಸುಂಧರಾ ಫಿಲಿಯೋಜಾ ತಿಳಿಸಿದರು.

ಕರ್ನಾಟಕ ಇತಿಹಾಸ ಅಕಾಡೆಮಿಯು ಮೈಸೂರಿನ ಸ್ವಗೃಹದಲ್ಲಿ ಸೋಮವಾರ ನೀಡಿದ ‘ಇತಿಹಾಸ ಸಂಸ್ಕೃತಿ ಶ್ರೀ’ ಪ್ರಶಸ್ತಿ ಹಾಗೂ ₹ 1 ಲಕ್ಷ ನಗದು ಸ್ವೀಕರಿಸಿ ಮಾತನಾಡಿದರು.

‘ಹಂಪಿಯನ್ನು 1790ರ ಆಸುಪಾಸಿನಲ್ಲಿ ಬ್ರಿಟಿಷರು ಯಾವ ರಾಜ್ಯಕ್ಕೆ ಸೇರ್ಪಡೆಗೊಳಿಸಬೇಕು ಎಂಬ ವಿಷಯ ಪ್ರಸ್ತಾಪಿಸಿದಾಗ, ಮರಾಠಿಗರು ಮಹಾರಾಷ್ಟ್ರಕ್ಕೆ ಸೇರ್ಪಡೆಗೊಳಿಸುವಂತೆ, ಹೈದರಾಬಾದಿನ ನಿಜಾಮರು ತಮ್ಮ ರಾಜ್ಯಕ್ಕೆ ಸೇರ್ಪಡೆಗೊಳಿಸಿ ಎಂದು ಪ್ರಬಲ ಹಕ್ಕೊತ್ತಾಯ ಮಂಡಿಸಿದ್ದರು. ಆಗ ಶ್ರೀರಂಗಪಟ್ಟಣದ ಅರಸನಾಗಿದ್ದ ಟಿಪ್ಪು ಸುಲ್ತಾನ್, ಹಂಪಿ ಕರ್ಣಾಟಕ ರಾಜ್ಯಕ್ಕೆ ಸೇರಬೇಕು ಎಂದು ಪ್ರಬಲ ಹಕ್ಕೊತ್ತಾಯದ ಜತೆಗೆ ಹಟ ಹಿಡಿದ ಪರಿಣಾಮ ಶತಮಾನಗಳಿಂದಲೂ ಹಂಪಿ ಕರ್ನಾಟಕದಲ್ಲೇ ಉಳಿದುಕೊಳ್ಳಲು ಸಾಧ್ಯವಾಯಿತು. ಇದನ್ನು ಬ್ರಿಟಿಷ್ ಲೇಖಕರು ತಮ್ಮ ಕೃತಿಗಳಲ್ಲಿ ದಾಖಲಿಸಿದ್ದಾರೆ’ ಎಂದು ತಿಳಿಸಿದರು.

‘ಟಿಪ್ಪು ಅರಸನಾಗುವ ಮುನ್ನ ಶ್ರೀರಂಗಪಟ್ಟಣದಲ್ಲಿ ಬ್ರಿಟಿಷರು ಮೆರೆದ ಅಟ್ಟಹಾಸ, ದೌರ್ಜನ್ಯಕ್ಕೆ ಲೆಕ್ಕವಿಲ್ಲ. ಇದನ್ನು ಕೊನೆಗಾಣಿಸಿದವ ಟಿಪ್ಪು. ಆದರೆ, ಎಲ್ಲಿಯೂ ಬ್ರಿಟಿಷರ ಕ್ರೂರತೆ ದಾಖಲಾಗಿಲ್ಲ. ಟಿಪ್ಪು ಅನೇಕ ಒಳ್ಳೆಯ ಕೆಲಸ ಮಾಡಿದ್ದಾನೆ, ಕೆಟ್ಟದ್ದನ್ನೂ ಮಾಡಿದ್ದಾನೆ. ಈ ಎರಡನ್ನೂ ದಾಖಲಿಸುವುದು, ನೈಜ ಇತಿಹಾಸವನ್ನು ಮುಂದಿನ ಪೀಳಿಗೆಗೆ ನೀಡುವುದು ಇತಿಹಾಸಕಾರರ ಆದ್ಯ ಕರ್ತವ್ಯವಾಗಬೇಕಿದೆ’ ಎಂದು ನುಡಿದರು.

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

10 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

10 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

11 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

11 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

11 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

11 hours ago