ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ) ಸ್ಪಷ್ಟನೆ ನೀಡಿದೆ. ಪುಸ್ತಕದ ಹೆಸರಿಗೂ ಧರ್ಮಕ್ಕೂ ಯಾವುದೇ ಸಂಬಂಧ ಇಲ್ಲ. ‘ಕೃಷ್ಣ’ ಎಂಬುದು ಕೃಷ್ಣಾ ನದಿಯ ಹೆಸರಾಗಿದೆ ಎಂದು ತಳಿಸಿದೆ.
ಇತ್ತೀಚೆಗೆ ಬಿಡುಗಡೆಯಾದ 6ನೇ ತರಗತಿಯ ಕನ್ನಡ (ಆರ್-3) ಪಠ್ಯಪುಸ್ತಕಕ್ಕೆ(Text Book) ‘ಕೃಷ್ಣ’ (Krishna)ಎಂದು ಹೆಸರು ಇಟ್ಟಿರುವುದಕ್ಕೆ ವಿರೋಧ ವ್ಯಕ್ತವಾಗಿತ್ತು. ಜೊತೆಗೆ, ಪಠ್ಯಪುಸ್ತಕದಲ್ಲಿ ಸಸ್ಯಾಹಾರವನ್ನು ಮಾತ್ರ ಪ್ರೋತ್ಸಾಹಿಸಲಾಗಿದೆ ಮತ್ತು ಮಾಂಸಾಹಾರವನ್ನು ಕಡೆಗಣಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿತ್ತು. ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ಎನ್ಸಿಇಆರ್ಟಿ, ಎಲ್ಲ ಆರ್-3 ಭಾಷಾ ಪಠ್ಯಪುಸ್ತಕಗಳಿಗೆ ಭಾರತದ ನದಿಗಳ ಹೆಸರನ್ನೇ ಇಡಲಾಗಿದೆ ಎಂದು ತಿಳಿಸಿದೆ.
ಹಿಂದಿ ಪಠ್ಯಪುಸ್ತಕಕ್ಕೆ ‘ಗಂಗಾ’, ಇಂಗ್ಲಿಷ್ ಪಠ್ಯಪುಸ್ತಕಕ್ಕೆ ‘ಕಾವೇರಿ’ ಹಾಗೂ ಉರ್ದು ಪಠ್ಯಪುಸ್ತಕಕ್ಕೆ ‘ಜಮುನಾ’ ಎಂದು ಹೆಸರು ಇಡಲಾಗಿದೆ. ಅದೇ ಮಾದರಿಯಲ್ಲಿ ಕನ್ನಡ ಪಠ್ಯಪುಸ್ತಕಕ್ಕೆ ‘ಕೃಷ್ಣ’ ಎಂದು ಹೆಸರಿಡಲಾಗಿದೆ ಎಂದು ಸ್ಪಷ್ಟಪಡಿಸಿದೆ.
ಕೃಷ್ಣಾ ನದಿ ಕರ್ನಾಟಕದ ಸಂಸ್ಕೃತಿ, ಭೌಗೋಳಿಕತೆ ಹಾಗೂ ಜನಜೀವನದೊಂದಿಗೆ ನಿಕಟ ಸಂಬಂಧ ಹೊಂದಿರುವ ಕಾರಣ ಈ ಹೆಸರನ್ನು ಆಯ್ಕೆ ಮಾಡಲಾಗಿದೆ ಎಂದು ಎನ್ಸಿಇಆರ್ಟಿ ತಿಳಿಸಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…