ಮಂಗಳೂರು: ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿದ್ದ ಶಾಲಾ ಪಠ್ಯಪುಸ್ತಕವನ್ನು ಕರ್ನಾಟಕ ಪಠ್ಯಪುಸ್ತಕ ಸಂಘವು ಒಟ್ಟು 8 ಅಂಶಗಳಿಗೆ ತಿದ್ದೋಲೆ ಮಾಡಿದೆ. ಜೊತೆಗೆ ಕರಾವಳಿಯಲ್ಲಿ ಹೆಚ್ಚು ಸುದ್ದಿ ಮಾಡಿದ್ದ ಬ್ರಹ್ಮರ್ಷಿ ನಾರಾಯಣ ಗುರು ಪಠ್ಯವನ್ನು ಕನ್ನಡ ಭಾಷೆಯಿಂದ ಸಮಾಜ ವಿಜ್ಞಾನಕ್ಕೆ ಸೇರಿಸುವಂತೆ ಪ್ರತ್ಯೇಕ ಸುತ್ತೋಲೆ ಹೊರಡಿಸಿದ್ದಾರೆ.
“ಪ್ರಸ್ತುತ 10 ನೇ ತರಗತಿಯ ಪ್ರಥಮ ಭಾಷೆ ಕನ್ನಡ ಪಠ್ಯದಲ್ಲಿದ್ದ ಬ್ರಹ್ಮರ್ಷಿ ನಾರಾಯಣ ಗುರು ಪಠ್ಯವನ್ನು ಯಥಾವತ್ತಾಗಿ 10 ನೇ ತರಗತಿಯ ಸಮಾಜ ವಿಜ್ಞಾನದ ಭಾಗ-1 ರ ಅಧ್ಯಾಯ 5ರ “ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣಾ ಚಳುವಳಿ” ಯಲ್ಲಿ ಅಳವಡಿಸಿ 2022-23 ರ ಶೈಕ್ಷಣಿಕ ಸಾಲಿನ ಎಲ್ಲಾ ಮಾಧ್ಯಮಗಳಿಗೂ ಸೇರಿದಂತೆ ಬೋಧನೆ-ಕಲಿಕೆ-ಮೌಲ್ಯಮೌಪನಕ್ಕೆ ಪರಿಗಣಿಸುವುದು” ಎಂದು ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪ್ರೌಢಶಾಲೆಗಳಿಗೆ ಜು. 13 ರಂದು ಪ್ರತ್ಯೇಕ ಸುತ್ತೋಲೆ ಹೋಗಿದೆ ಎಂದು ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಹಿರಿಯ ಸಹಾಯಕ ನಿರ್ದೇಶಕ, ಡಾ.ಕೃಷ್ಣ ಮೂರ್ತಿ ಸ್ಪಷ್ಟನೆ ನೀಡಿದ್ದಾರೆ ಎಂದು ತಮಗೆ ಮಾಹಿತಿ ನೀಡಿರುವುದಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ಖಜಾಂಚಿ, ಆರ್ ಪದ್ಮರಾಜ್ ತಿಳಿಸಿದ್ದಾರೆ.
ಕನ್ನಡ ಪಠ್ಯದಲ್ಲಿ ಬ್ರಹ್ಮರ್ಷಿ ನಾರಾಯಣ ಗುರು ಪಾಠವು ಭೌತಿಕವಾಗಿದ್ದರೂ ಅದನ್ನು ಸಮಾಜ ವಿಜ್ಞಾನದ ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣಾ ಚಳುವಳಿ” ಯಲ್ಲಿ ಬೋಧಿಸಿ ಮೌಲ್ಯಮೌಪನಕ್ಕೆ ಪರಿಗಣಿಸಲು ತಿಳಿಸಲಾಗಿದೆ ಎಂದರು.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…