Featured

ಪಠ್ಯಪುಸ್ತಕ ವಿವಾದ: ನಾರಾಯಣ ಗುರು ಪಾಠವನ್ನು ಸಮಾಜ ವಿಜ್ಞಾನಕ್ಕೆ ಸೇರಿಸಿ ಪ್ರತ್ಯೇಕ ಸುತ್ತೋಲೆ ಹೊರಡಿಸಿದ ಸರ್ಕಾರ – Vishwanews24

ಪಠ್ಯಪುಸ್ತಕ ವಿವಾದ: ನಾರಾಯಣ ಗುರು ಪಾಠವನ್ನು ಸಮಾಜ ವಿಜ್ಞಾನಕ್ಕೆ ಸೇರಿಸಿ ಪ್ರತ್ಯೇಕ

ಸುತ್ತೋಲೆ ಹೊರಡಿಸಿದ ಸರ್ಕಾರ

ಮಂಗಳೂರು: ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿದ್ದ ಶಾಲಾ ಪಠ್ಯಪುಸ್ತಕವನ್ನು ಕರ್ನಾಟಕ ಪಠ್ಯಪುಸ್ತಕ ಸಂಘವು ಒಟ್ಟು 8 ಅಂಶಗಳಿಗೆ ತಿದ್ದೋಲೆ ಮಾಡಿದೆ. ಜೊತೆಗೆ ಕರಾವಳಿಯಲ್ಲಿ ಹೆಚ್ಚು ಸುದ್ದಿ ಮಾಡಿದ್ದ ಬ್ರಹ್ಮರ್ಷಿ ನಾರಾಯಣ ಗುರು ಪಠ್ಯವನ್ನು ಕನ್ನಡ ಭಾಷೆಯಿಂದ ಸಮಾಜ ವಿಜ್ಞಾನಕ್ಕೆ ಸೇರಿಸುವಂತೆ ಪ್ರತ್ಯೇಕ ಸುತ್ತೋಲೆ ಹೊರಡಿಸಿದ್ದಾರೆ.

“ಪ್ರಸ್ತುತ 10 ನೇ ತರಗತಿಯ ಪ್ರಥಮ ಭಾಷೆ ಕನ್ನಡ ಪಠ್ಯದಲ್ಲಿದ್ದ ಬ್ರಹ್ಮರ್ಷಿ ನಾರಾಯಣ ಗುರು ಪಠ್ಯವನ್ನು ಯಥಾವತ್ತಾಗಿ 10 ನೇ ತರಗತಿಯ ಸಮಾಜ ವಿಜ್ಞಾನದ ಭಾಗ-1 ರ ಅಧ್ಯಾಯ 5ರ “ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣಾ ಚಳುವಳಿ” ಯಲ್ಲಿ ಅಳವಡಿಸಿ 2022-23 ರ ಶೈಕ್ಷಣಿಕ ಸಾಲಿನ ಎಲ್ಲಾ ಮಾಧ್ಯಮಗಳಿಗೂ ಸೇರಿದಂತೆ ಬೋಧನೆ-ಕಲಿಕೆ-ಮೌಲ್ಯಮೌಪನಕ್ಕೆ ಪರಿಗಣಿಸುವುದು” ಎಂದು ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪ್ರೌಢಶಾಲೆಗಳಿಗೆ ಜು. 13 ರಂದು ಪ್ರತ್ಯೇಕ ಸುತ್ತೋಲೆ ಹೋಗಿದೆ ಎಂದು ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಹಿರಿಯ ಸಹಾಯಕ ನಿರ್ದೇಶಕ, ಡಾ.ಕೃಷ್ಣ ಮೂರ್ತಿ ಸ್ಪಷ್ಟನೆ ನೀಡಿದ್ದಾರೆ ಎಂದು ತಮಗೆ ಮಾಹಿತಿ ನೀಡಿರುವುದಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ಖಜಾಂಚಿ, ಆರ್ ಪದ್ಮರಾಜ್‌ ತಿಳಿಸಿದ್ದಾರೆ.

ಕನ್ನಡ ಪಠ್ಯದಲ್ಲಿ ಬ್ರಹ್ಮರ್ಷಿ ನಾರಾಯಣ ಗುರು ಪಾಠವು ಭೌತಿಕವಾಗಿದ್ದರೂ ಅದನ್ನು ಸಮಾಜ ವಿಜ್ಞಾನದ ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣಾ ಚಳುವಳಿ” ಯಲ್ಲಿ ಬೋಧಿಸಿ ಮೌಲ್ಯಮೌಪನಕ್ಕೆ ಪರಿಗಣಿಸಲು ತಿಳಿಸಲಾಗಿದೆ ಎಂದರು.

ಭಗವತಿ ನಾಸಿಕ್ ಬ್ಯಾಂಡ್ ಕಲಾವಿದರ ಜೊತೆ ಉಡುಪಿಯಲ್ಲಿ ವೇಷಧಾರಿಯೊಂದಿಗೆ ಯುವತಿಯೊಬ್ಬಳು ಹೆಜ್ಜೆ ಹಾಕಿದ ದೃಶ್ಯ ಸಖತ್ ವೈರಲ್

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

13 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

14 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

14 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

17 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

17 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

17 hours ago