Featured

ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಸೇರ್ಪಡೆಗೆ ರಾಜ್ಯ ಸರಕಾರದ ನಿರ್ಧಾರ ಸ್ವಾಗತಾರ್ಹ : ಯಶ್ ಪಾಲ್ ಸುವರ್ಣ – Vishwanews24

ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಸೇರ್ಪಡೆಗೆ ರಾಜ್ಯ ಸರಕಾರದ ನಿರ್ಧಾರ ಸ್ವಾಗತಾರ್ಹ : ಯಶ್ ಪಾಲ್ ಸುವರ್ಣ – Vishwanews24

ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ  ಸೇರ್ಪಡೆಗೊಳಿಸಿ ದೇಶದ ಸಧೃಢ ಭವಿಷ್ಯ ವನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರವಹಿಸಲಿರುವ ವಿದ್ಯಾರ್ಥಿಗಳಿಗೆ ನೈತಿಕ ಮೌಲ್ಯಗಳನ್ನು ತುಂಬಲು ಪೂರಕವಾಗಿರಲಿರುವ ರಾಜ್ಯ ಸರಕಾರದ ನಿರ್ಧಾರವನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಸ್ವಾಗತಿಸಿದ್ದಾರೆ.
ದೇಶದಾದ್ಯಂತ  ಮತೀಯವಾದಿಗಳು ದೇಶದ ಶಿಕ್ಷಣ ವ್ಯವಸ್ಥೆಯನ್ನು ನಾಶಗೊಳಿಸಿ, ಬಡ ವಿದ್ಯಾರ್ಥಿಗಳ ಶಿಕ್ಷಣದ ಹಕ್ಕನ್ನು ಮೊಟಕುಗೊಳಿಸಿ, ಹೈಕೋರ್ಟ್ ತೀರ್ಪುಗಳನ್ನೇ ಬಹಿರಂಗವಾಗಿ ಧಿಕ್ಕರಿಸಿರುವ ಈ ಸಂದರ್ಭದಲ್ಲಿ ರಾಜ್ಯ ಸರಕಾರದ ಭಗವದ್ಗೀತೆ ಸೇರ್ಪಡೆ ಚಿಂತನೆ ಅತ್ಯಂತ ಸಮಂಜಸವಾಗಿದೆ.
ಗುಜರಾತ್ ಸರಕಾರದ ಮಾದರಿಯಲ್ಲೇ ರಾಜ್ಯ ಸರಕಾರ ಶಿಕ್ಷಣ ವ್ಯವಸ್ಥೆಯಲ್ಲಿ ಇಸ್ಲಾಮೀಕರಣದ ಷಡ್ಯಂತ್ರವನ್ನು  ರೂಪಿಸುತ್ತಿರುವ ರಾಷ್ಟ್ರವಿರೋಧಿಗಳಿಗೆ ಈ ಮೂಲಕ ತಕ್ಕ ಉತ್ತರ ನೀಡಿದಂತಾಗಿದೆ.
ಹಿಜಾಬ್ ತೀರ್ಪು ವಿರೋಧಿಸಿ ಮುಸ್ಲಿಂ ಸಂಘಟನೆಗಳು ಬಂದ್ ಕರೆ ನೀಡಿದ್ದ ಸಂದರ್ಭದಲ್ಲಿ  ಜಿಲ್ಲೆಯಾದ್ಯಂತ ಮುಸ್ಲಿಂ ಬಸ್ ಮಾಲಕರು ಯಾವುದೇ ಪೂರ್ವಮಾಹಿತಿ ನೀಡದೇ ಬಸ್ ಸಂಚಾರ ಸ್ಥಗಿತಗೊಳಿಸಿ ವಿದ್ಯಾರ್ಥಿಗಳು, ದಿನನಿತ್ಯ ಬಸ್ ಅವಲಂಬಿಸಿರುವ ಬಡ ಮಹಿಳೆಯರು ಹಾಗೂ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಶೀಘ್ರದಲ್ಲೇ ಸರಕಾರಿ ಬಸ್ ಸೇವೆ ಒದಗಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ.
ಕಾಪು ಮಾರಿಗುಡಿ ವ್ಯವಸ್ಥಾಪನಾ ಸಮಿತಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮನವಿಗೆ ಸ್ಪಂದಿಸಿ ಮಾರಿಜಾತ್ರೆ ಸಂದರ್ಭದಲ್ಲಿ ಹಿಂದುಯೇತರರಿಗೆ ಅಂಗಡಿ ಮಳಿಗೆಗೆ ಅವಕಾಶ ನೀಡದಿರುವ ನಿರ್ಧಾರ ಇತರ ದೇವಸ್ಥಾನ ಮಂದಿರಗಳಲ್ಲೂ ಮುಂದುವರಿಸಿ ಮತಾಂಧರೊಂದಿಗೆ ವ್ಯವಹಾರಕ್ಕೆ ಕಡಿವಾಣ ಹಾಕಬೇಕಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

14 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

14 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

14 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

15 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

15 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago