ಮಡಿಕೇರಿ : ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರನಲ್ಲ, ಆದರೆ, ಪಠ್ಯ ಪುಸ್ತಕಗಳಲ್ಲಿ ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಎಂದು ವೈಭವೀಕರಿಸಲಾಗಿದೆ ಹೀಗಾಗಿ ಪಠ್ಯ ಪುಸ್ತಕದಿಂದ ಟಿಪ್ಪು ಪಾಠವನ್ನು ಕೈಬಿಡುವಂತೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಪತ್ರ ಬರೆದಿರುವ ಅಪ್ಪಚ್ಚು ರಂಜನ್, ಟಿಪ್ಪು ಸುಲ್ತಾನ್ ಫ್ರೆಂಚ್ ರೊಂದಿಗೆ ಕೈ ಜೋಡಿಸಿದ್ದ. ತನ್ನ ಸಾಮ್ರಾಜ್ಯ ವಿಸ್ತರಿಸಿಕೊಳ್ಳಲು ಫ್ರೆಂಚ್ಸಹಾಯ ಪಡೆಯುತ್ತಿದ್ದನು. ಅಲ್ಲದೇ ಆತ ಹಿಂದೂ ಮತ್ತು ಕ್ರಿಶ್ಚಿಯನ್ ವಿರೋಧಿಯಾಗಿದ್ದ ಮಂಗಳೂರಿನಲ್ಲಿ 50 ಸಾವಿರಕ್ಕೂ ಅಧಿಕ ಕ್ರೈಸ್ತರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿದ್ದನು ಎಂದು ಆರೋಪಿಸಿದ್ದಾರೆ.
ಹೀಗಾಗಿ ಪಠ್ಯಪುಸ್ತಕದಿಂದ ಟಿಪ್ಪು ಕುರಿತ ಪಠ್ಯವನ್ನು ಕೈಬಿಡಬೇಕು. ಮುಂದಿನ ದಿನಗಳಲ್ಲಿ ಇತಿಹಾಸ ತಜ್ಞರ ಅಭಿಪ್ರಾಯ ಸಂಗ್ರಹಿಸಿ ಸ್ವಾತಂತ್ರ್ಯ ಹೋರಾಟಗಾರರ ಪಠ್ಯ ಸೇರಿಸಬೇಕು ಎಂದು ಪತ್ರದ ಮೂಲಕ ಅಪ್ಪಚ್ಚು ರಂಜನ್ ಆಗ್ರಹಿಸಿದ್ದಾರೆ.
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…