ಪಡಿತರದಾರರಿಗೆ ಏಪ್ರಿಲ್‌ನಿಂದ ಗೋಧಿ ವಿತರಣೆಗೆ ಬ್ರೇಕ್‌ ; ಗೋಧಿ ಬದಲು ಪ್ರತಿ ಸದಸ್ಯನಿಗೆ 1 ಕೆ.ಜಿ. ಅಕ್ಕಿ ವಿತರಣೆ – Vishwanews24

Featured, ರಾಜ್ಯ ನ್ಯೂಸ್

ಏಪ್ರಿಲ್‌ನಿಂದ ಪಡಿತರದಾರರಿಗೆ ಗೋಧಿ ಬದಲು ಅಕ್ಕಿ ಮಾತ್ರ ಲಭ್ಯ

2 ಕೆ.ಜಿ. ಗೋಧಿ ವಿತರಣೆಗೆ ಬ್ರೇಕ್‌

ಗೋಧಿ ಬದಲು ಪ್ರತಿ ಸದಸ್ಯನಿಗೆ 1 ಕೆ.ಜಿ. ಅಕ್ಕಿ ವಿತರಣೆ 

ನ್ಯಾಯಬೆಲೆ ಅಂಗಡಿಗಳಲ್ಲಿ ಇದುವರೆಗೂ ವಿತರಿಸಲಾಗುತ್ತಿದ್ದ ಗೋಧಿ ಇನ್ನು ಪಡಿತರ ಚೀಟಿದಾರರಿಗೆ ಸದ್ಯಕ್ಕೆ ಸಿಗುವುದಿಲ್ಲ. ಮಾರ್ಚ್ ತಿಂಗಳೇ ಗೋಧಿ ವಿತರಣೆ ಕೊನೆಯಾಗಲಿದೆ. ಇದರ ಬದಲು ಏಪ್ರಿಲ್‌ನಿಂದ ಹೆಚ್ಚುವರಿಯಾಗಿ ಪ್ರತಿ ಸದಸ್ಯನಿಗೆ 1 ಕೆ.ಜಿ.ಅಕ್ಕಿ ವಿತಣೆಯಾಗಲಿದೆ.

ಇದುವರೆಗೂ ಕೇಂದ್ರ ಮತ್ತು ರಾಜ್ಯ ಸರಕಾರದ ಕೋಟಾದಲ್ಲಿಪ್ರತಿ ಸದಸ್ಯನಿಗೆ 10 ಕೆ.ಜಿ. ಹಾಗೂ ಒಂದು ಪಡಿತರ ಕಾರ್ಡ್‌ಗೆ 2 ಕೆ.ಜಿ. ಗೋಧಿ ವಿತರಣೆ ಮಾಡಲಾಗುತ್ತಿತ್ತು. ಆದರೆ ಏಪ್ರಿಲ್‌ ತಿಂಗಳಿಂದ ಕೊರೊನಾ ಕಾರಣ ಕೇಂದ್ರ ಸರಕಾರ ವಿತರಣೆ ಮಾಡುತ್ತಿದ್ದ ತಲಾ 5 ಕೆ.ಜಿ. ಅಕ್ಕಿ ವಿತರಣೆಯ ಬಾಬತ್ತು ಮುಗಿಯಲಿದೆ.

ಹಿಜಾಬ್ ವಿವಾದ : ಯಾರ್ಯಾರದೋ ಷಡ್ಯಂತ್ರಕ್ಕೆ ನೀವು ಬಲಿಯಾಗಬೇಡಿ, ಮುಂದೆ ನಿಮ್ಮ ಜೀವನದಲ್ಲಿ ಅವರ್ಯಾರು ಬರೋದಿಲ್ಲ : ಶೋಭಾ ಕರಂದ್ಲಾಜೆ – Vishwanews24

ಪ್ರತಿ ಸದಸ್ಯನಿಗೆ 1 ಕೆ.ಜಿ. ಅಕ್ಕಿ!
ಪಡಿತರದಾರರಿಗೆ ಏಪ್ರಿಲ್‌ನಿಂದ ಪ್ರತಿ ಸದಸ್ಯನಿಗೆ ತಲಾ 5 ಕೆ.ಜಿ. ಅಕ್ಕಿ ಹಾಗೂ ಗೋಧಿ ಬದಲು ಪ್ರತಿ ಸದಸ್ಯನಿಗೆ 1 ಕೆ.ಜಿ. ಸೇರಿ 6 ಕೆ.ಜಿ. ಲಭ್ಯವಾಗಲಿದೆ. ಆದರೆ ಇನ್ಮುಂದೆ ಗೋಧಿ ವಿತರಣೆ ಇರುವುದಿಲ್ಲಎಂದು ಹೇಳಲಾಗಿದೆ. ಮುಂದಿನ ದಿನಗಳಲ್ಲಿ ಈಗ ಬೆಂಬಲ ಬೆಲೆ ದರದಲ್ಲಿ ಖರೀದಿಸಿರುವ ರಾಗಿಯನ್ನು ಪ್ರತಿ ಸದಸ್ಯನಿಗೆ 1 ಕೆ.ಜಿ.ಯಂತೆ ವಿತರಿಸುವ ಸಾಧ್ಯತೆಯೂ ಇದೆ. ಹೀಗಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಇನ್ನು ಅಕ್ಕಿಯಷ್ಟೇ ಪಡಿತರದಾರರಿಗೆ ಸಿಗಲಿದೆ.

ಸರಕಾರದ ನಿರ್ಧಾರ!
ರಾಜ್ಯ ಸರಕಾರದಿಂದ ಆದೇಶ ಬಂದಿದ್ದರೂ ಇನ್ನೂ ನ್ಯಾಯಬೆಲೆ ಅಂಗಡಿಗಳಿಗೆ ಈ ವಿಷಯ ತಲುಪಿಲ್ಲ. ಆದರೆ ಮೌಖಿಕವಾಗಿ ಈಗಾಗಲೇ ನ್ಯಾಯಬೆಲೆ ಅಂಗಡಿಗಳಲ್ಲಿ ಮುಂದಿನ ತಿಂಗಳಿಂದ ಗೋಧಿ ಸಿಗಲ್ಲ. ಗೋಧಿ ಬದಲು ಪ್ರತಿ ಸದಸ್ಯನಿಗೆ 1 ಕೆ.ಜಿ. ಹೆಚ್ಚುವರಿಯಾಗಿ ವಿತರಿಸಲಿದ್ದಾರೆ ಎಂದು ತಿಳಿಸಲಾಗಿದೆ. ಆದರೆ ಸರಕಾರದ ನಿರ್ಧಾರಕ್ಕೆ ಆಗಲೇ ಪಡಿತರದಾರರಿಗೆ ಆಕ್ಷೇಪ ವ್ಯಕ್ತವಾಗಿದೆ.

ಮಾ.21ಕ್ಕೆ ಅಪ್ಪಳಿಸಲಿದೆ ಅಸಾನಿ ಚಂಡಮಾರುತ ; ಮೀನುಗಾರಿಕೆಗೆ ತೆರಳದಂತೆ  ಹವಾಮಾನ ಇಲಾಖೆʼಯಿಂದ ಎಚ್ಚರಿಕೆ

\

 

Leave a Reply