ಬೆಂಗಳೂರು: ನಾಲ್ಕು ಚಕ್ರದ ಸ್ವಂತ ವಾಹನ ಹೊಂದಿದವರ ಅಂತ್ಯೋದಯ, ಬಿಪಿಎಲ್ ಕಾರ್ಡ್ಗಳನ್ನು ಎಪಿಎಲ್ ಕಾರ್ಡ್ಗಳಾಗಿ ಪರಿವರ್ತಿಸುವ ಪ್ರಕ್ರಿಯೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬ್ರೇಕ್ ಹಾಕಲಿದೆ
ಅಂತ್ಯೋದಯ, ಬಿಪಿಎಲ್ ಪಡಿತರ ಚೀಟಿಯನ್ನು ಅಕ್ರಮವಾಗಿ ಪಡೆದು ಬಡವರ ʼಅನ್ನಭಾಗ್ಯʼಕ್ಕೆ ಕನ್ನ ಹಾಕಿದವರನ್ನು ಪತ್ತೆ ಹಚ್ಚುವ ಕಾರ್ಯಾಚರಣೆಯನ್ನು ಆಹಾರ ಇಲಾಖೆ ಆರಂಭಿಸಿತ್ತು. ಅನರ್ಹ ಪಡಿತರ ಚೀಟಿಗಳನ್ನು ಎಪಿಎಲ್ಗೆ ಪರಿವರ್ತಿಸುವ ಪ್ರಕ್ರಿಯೆ ನಡೆಸಿತ್ತು
ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು, 3 ಹೆಕ್ಟೇರ್ಗಿಂತ ಹೆಚ್ಚು ಜಮೀನು ಹೊಂದಿದವರು, 1.20 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಹೊಂದಿದವರು ಮತ್ತು ನಾಲ್ಕು ಚಕ್ರದ ವೈಯಕ್ತಿಕ ವಾಹನ ಇರುವವರು ಅಂತ್ಯೋದಯ ಅಥವಾ ಬಿಪಿಎಲ್ ಪಡಿತರ ಚೀಟಿ ಪಡೆಯಲು ಅರ್ಹರಲ್ಲ ಎಂದು ಇಲಾಖೆ ಪಟ್ಟಿ ಮಾಡಿತ್ತು.
ಉಡುಪಿ ಜಿಲ್ಲಾ ಪ್ರವಾಸ – ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಜ್ಯಪಾಲರು – Vishwanews24
ಈ ಸಂಬಂಧ ಕ್ರಮ ಕೈಗೊಳ್ಳಲು ಎಲ್ಲ ಡಿಸಿಗಳು ಮತ್ತು ಇಲಾಖೆ ಜಂಟಿ/ಉಪನಿರ್ದೇಶಕರಿಗೂ ಈ ಹಿಂದೆ ಆಹಾರ ಇಲಾಖೆ ಸೂಚನೆ ನೀಡಿತ್ತು. ಆದರೆ ನಾಲ್ಕು ಚಕ್ರದ ಸ್ವಂತ ವಾಹನ ಹೊಂದಿದವರನ್ನು ಅನರ್ಹ ಪಟ್ಟಿಗೆ ಸೇರಿಸಿರುವುದಕ್ಕೆ ಸರ್ಕಾರ ಹಾಗೂ ಪಕ್ಷದವರಲ್ಲೇ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಆದೇಶ ವಾಪಸ್ ತೆಗೆದುಕೊಳ್ಳಲು ಸಿಎಂ ಮೇಲೆ ಒತ್ತಡ ಕೂಡ ಹೇರಲಾಗಿತ್ತು.
ಇದೀಗ ತನ್ನ ಸುತ್ತೋಲೆಯನ್ನು ಮುಂದಿನ ಆದೇಶದವರೆಗೆ ಆಹಾರ ಇಲಾಖೆ ತಡೆ ಹಿಡಿದಿದೆ. ಆ ಸಂಬಂಧ ಆದೇಶವನ್ನು ಹೊರಡಿಸಿದೆ.
ಮಗನೇ ನಿನ್ನ ನಾಲಗೆ ಕತ್ತರಿಸ್ತೀವಿ : ಕೆಎಸ್ ಈಶ್ವರಪ್ಪಗೆ ಬೆದರಿಕೆ ಪತ್ರ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…