Featured

ಪಡಿತರ ಚೀಟಿʼದಾರರಿಗೆ ಬಿಗ್‌ ಶಾಕ್ ..! ನಾಲ್ಕು ಚಕ್ರದ ಸ್ವಂತ ವಾಹನ ಹೊಂದಿದವರ ʻ ಅಂತ್ಯೋದಯ, ಬಿಪಿಎಲ್ ಕಾರ್ಡ್‌ʼ ರದ್ದು – Vishwanews24

ಪಡಿತರ ಚೀಟಿʼದಾರರಿಗೆ ಬಿಗ್‌ ಶಾಕ್ ..! ನಾಲ್ಕು ಚಕ್ರದ ಸ್ವಂತ ವಾಹನ ಹೊಂದಿದವರ ʻ ಅಂತ್ಯೋದಯ, ಬಿಪಿಎಲ್ ಕಾರ್ಡ್‌ʼ ರದ್ದು

ಬೆಂಗಳೂರು: ನಾಲ್ಕು ಚಕ್ರದ ಸ್ವಂತ ವಾಹನ ಹೊಂದಿದವರ ಅಂತ್ಯೋದಯ, ಬಿಪಿಎಲ್‌ ಕಾರ್ಡ್‌ಗಳನ್ನು ಎಪಿಎಲ್‌ ಕಾರ್ಡ್‌ಗಳಾಗಿ ಪರಿವರ್ತಿಸುವ ಪ್ರಕ್ರಿಯೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬ್ರೇಕ್‌ ಹಾಕಲಿದೆ

ಅಂತ್ಯೋದಯ, ಬಿಪಿಎಲ್‌ ಪಡಿತರ ಚೀಟಿಯನ್ನು ಅಕ್ರಮವಾಗಿ ಪಡೆದು ಬಡವರ ʼಅನ್ನಭಾಗ್ಯʼಕ್ಕೆ ಕನ್ನ ಹಾಕಿದವರನ್ನು ಪತ್ತೆ ಹಚ್ಚುವ ಕಾರ್ಯಾಚರಣೆಯನ್ನು ಆಹಾರ ಇಲಾಖೆ ಆರಂಭಿಸಿತ್ತು. ಅನರ್ಹ ಪಡಿತರ ಚೀಟಿಗಳನ್ನು ಎಪಿಎಲ್‌ಗೆ ಪರಿವರ್ತಿಸುವ ಪ್ರಕ್ರಿಯೆ ನಡೆಸಿತ್ತು

ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು, 3 ಹೆಕ್ಟೇರ್‌ಗಿಂತ ಹೆಚ್ಚು ಜಮೀನು ಹೊಂದಿದವರು, 1.20 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಹೊಂದಿದವರು ಮತ್ತು ನಾಲ್ಕು ಚಕ್ರದ ವೈಯಕ್ತಿಕ ವಾಹನ ಇರುವವರು ಅಂತ್ಯೋದಯ ಅಥವಾ ಬಿಪಿಎಲ್‌ ಪಡಿತರ ಚೀಟಿ ಪಡೆಯಲು ಅರ್ಹರಲ್ಲ ಎಂದು ಇಲಾಖೆ ಪಟ್ಟಿ ಮಾಡಿತ್ತು.

ಉಡುಪಿ ಜಿಲ್ಲಾ ಪ್ರವಾಸ – ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಜ್ಯಪಾಲರು – Vishwanews24

ಈ ಸಂಬಂಧ ಕ್ರಮ ಕೈಗೊಳ್ಳಲು ಎಲ್ಲ ಡಿಸಿಗಳು ಮತ್ತು ಇಲಾಖೆ ಜಂಟಿ/ಉಪನಿರ್ದೇಶಕರಿಗೂ ಈ ಹಿಂದೆ ಆಹಾರ ಇಲಾಖೆ ಸೂಚನೆ ನೀಡಿತ್ತು. ಆದರೆ ನಾಲ್ಕು ಚಕ್ರದ ಸ್ವಂತ ವಾಹನ ಹೊಂದಿದವರನ್ನು ಅನರ್ಹ ಪಟ್ಟಿಗೆ ಸೇರಿಸಿರುವುದಕ್ಕೆ ಸರ್ಕಾರ ಹಾಗೂ ಪಕ್ಷದವರಲ್ಲೇ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಆದೇಶ ವಾಪಸ್‌ ತೆಗೆದುಕೊಳ್ಳಲು ಸಿಎಂ ಮೇಲೆ ಒತ್ತಡ ಕೂಡ ಹೇರಲಾಗಿತ್ತು.

ಇದೀಗ ತನ್ನ ಸುತ್ತೋಲೆಯನ್ನು ಮುಂದಿನ ಆದೇಶದವರೆಗೆ ಆಹಾರ ಇಲಾಖೆ ತಡೆ ಹಿಡಿದಿದೆ. ಆ ಸಂಬಂಧ ಆದೇಶವನ್ನು ಹೊರಡಿಸಿದೆ.

ಮಗನೇ ನಿನ್ನ ನಾಲಗೆ ಕತ್ತರಿಸ್ತೀವಿ : ಕೆಎಸ್ ಈಶ್ವರಪ್ಪಗೆ ಬೆದರಿಕೆ ಪತ್ರ – Vishwanews24

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

20 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago