Featured

ಪಡಿತರ ಚೀಟಿದಾರರೇ ಗಮನಿಸಿ : ನ.30 ರೊಳಗೆ `e-KYC’ ಮಾಡದಿದ್ದರೆ ಮುಂದಿನ ತಿಂಗಳು `ರೇಷನ್’ ಸಿಗಲ್ಲ – vishwanews24

ಪಡಿತರ ಚೀಟಿದಾರರೇ ಗಮನಿಸಿ : ನ.30 ರೊಳಗೆ `e-KYC’ ಮಾಡದಿದ್ದರೆ ಮುಂದಿನ ತಿಂಗಳು `ರೇಷನ್’ ಸಿಗಲ್ಲ

ಬೆಂಗಳೂರು : ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು. ಹಾಗಾಗಿ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಸಹ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಹೆಬ್ಬೆರಳು ನೀಡಿ ಹೆಸರು ಮರು ನೋಂದಾವಣೆ (ಇ-ಕೆವೈಸಿ) ಮಾಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಈ ದಾಖಲೆಗಳು ಕಡ್ಡಾಯ

ಪಡಿತರ ಚೀಟಿಯ ಒರಿಜಿನಲ್ ಪ್ರತಿ

ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ

ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ

ಬ್ಯಾಂಕ್ ಪಾಸ್‌ಬುಕ್‌ನ ಫೋಟೋಕಾಪಿ

ಕುಟುಂಬದ ಯಜಮಾನನ ಎರಡು ಪಾಸ್‌ಪೋರ್ಟ್ ಅಳತೆಯ ಪೋಟೋ

ಪಡಿತರ ಚೀಟಿ ಮತ್ತು ಆಧಾರ್ ಅನ್ನು ಆನ್ ಲೈನ್ ನಲ್ಲಿ ಈ ರೀತಿ ಲಿಂಕ್ ಮಾಡಿ

ನಿಮ್ಮ ರಾಜ್ಯದ ಅಧಿಕೃತ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪೋರ್ಟಲ್ಗೆ ಭೇಟಿ ನೀಡಿ.

ಸಕ್ರಿಯ ಕಾರ್ಡ್ನೊಂದಿಗೆ ಆಧಾರ್ ಲಿಂಕ್ ಆಯ್ಕೆ ಮಾಡಿ.

ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿ ಮತ್ತು ನಂತರ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ.

ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.

ಮುಂದುವರಿಯಿರಿ / ಸಲ್ಲಿಸಿ ಬಟನ್ ಆಯ್ಕೆ ಮಾಡಿ.

ನೀವು ಈಗ ನಿಮ್ಮ ಮೊಬೈಲ್ ಫೋನ್ಗೆ ಒಟಿಪಿಯನ್ನು ಸ್ವೀಕರಿಸುತ್ತೀರಿ.

ಆಧಾರ್ ಪಡಿತರ ಲಿಂಕ್ ಪುಟದಲ್ಲಿ ಒಟಿಪಿಯನ್ನು ನಮೂದಿಸಿ, ಮತ್ತು ಅದಕ್ಕಾಗಿ ನಿಮ್ಮ ವಿನಂತಿಯನ್ನು ಈಗ ಸಲ್ಲಿಸಲಾಗಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

2 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

2 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

2 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

3 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

3 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago