ಬೆಂಗಳೂರು : ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.
ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು. ಹಾಗಾಗಿ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಸಹ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಹೆಬ್ಬೆರಳು ನೀಡಿ ಹೆಸರು ಮರು ನೋಂದಾವಣೆ (ಇ-ಕೆವೈಸಿ) ಮಾಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಈ ದಾಖಲೆಗಳು ಕಡ್ಡಾಯ
ಪಡಿತರ ಚೀಟಿಯ ಒರಿಜಿನಲ್ ಪ್ರತಿ
ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ
ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ
ಬ್ಯಾಂಕ್ ಪಾಸ್ಬುಕ್ನ ಫೋಟೋಕಾಪಿ
ಕುಟುಂಬದ ಯಜಮಾನನ ಎರಡು ಪಾಸ್ಪೋರ್ಟ್ ಅಳತೆಯ ಪೋಟೋ
ಪಡಿತರ ಚೀಟಿ ಮತ್ತು ಆಧಾರ್ ಅನ್ನು ಆನ್ ಲೈನ್ ನಲ್ಲಿ ಈ ರೀತಿ ಲಿಂಕ್ ಮಾಡಿ
ನಿಮ್ಮ ರಾಜ್ಯದ ಅಧಿಕೃತ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪೋರ್ಟಲ್ಗೆ ಭೇಟಿ ನೀಡಿ.
ಸಕ್ರಿಯ ಕಾರ್ಡ್ನೊಂದಿಗೆ ಆಧಾರ್ ಲಿಂಕ್ ಆಯ್ಕೆ ಮಾಡಿ.
ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿ ಮತ್ತು ನಂತರ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ.
ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.
ಮುಂದುವರಿಯಿರಿ / ಸಲ್ಲಿಸಿ ಬಟನ್ ಆಯ್ಕೆ ಮಾಡಿ.
ನೀವು ಈಗ ನಿಮ್ಮ ಮೊಬೈಲ್ ಫೋನ್ಗೆ ಒಟಿಪಿಯನ್ನು ಸ್ವೀಕರಿಸುತ್ತೀರಿ.
ಆಧಾರ್ ಪಡಿತರ ಲಿಂಕ್ ಪುಟದಲ್ಲಿ ಒಟಿಪಿಯನ್ನು ನಮೂದಿಸಿ, ಮತ್ತು ಅದಕ್ಕಾಗಿ ನಿಮ್ಮ ವಿನಂತಿಯನ್ನು ಈಗ ಸಲ್ಲಿಸಲಾಗಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…