ಬೆಂಗಳೂರು: ನಕಲಿ ಪಡಿತರ ಚೀಟಿಗಳನ್ನು ತಡೆಯಲು ಸಾಧ್ಯವಾಗುವುದಿಲ್ಲವಾದ್ದರಿಂದ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ ಸುಮಾರು 120ರಿಂದ 126 ಕೋಟಿ ರು. ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ.
ನಕಲಿ ಪಡಿತರ ಚೀಟಿಗಳು ಮತ್ತು ಬೋಗಸ್ ಫಲಾನುಭವಿಗಳ ಪತ್ತೆಗಾಗಿ ಇ-ಕೆವೈಸಿ ದೃಢೀಕರಣವನ್ನು ಕಡ್ಡಾಯವಾಗಿ ಮಾಡಿಸುವಂತೆ ಆಹಾರ ಇಲಾಖೆ ಆದೇಶ ಹೊರಡಿಸಿತ್ತು. ಜುಲೈ 21ರೊಳಗೆ ಇ-ಕೆವೈಸಿ ದೃಢೀಕರಣ ಮಾಡಿಸಿಕೊಳ್ಳದಿದ್ದರೆ ಪಡಿತರ ನೀಡುವುದನ್ನೇ ನಿಲ್ಲಿಸುವುದಾಗಿ ಇಲಾಖೆ ಆದೇಶದಲ್ಲಿ ಸ್ಪಷ್ಟಪಡಿಸಿತ್ತು.
ಆದರೆ, ಇ-ಕೆವೈಸಿ ದೃಢೀಕರಣ ಮತ್ತು ಪಡಿತರ ವಿತರಣೆಯನ್ನು ಒಂದೇ ಸಮಯದಲ್ಲಿ ಮಾಡುತ್ತಿದ್ದ ಕಾರಣ ತಾಂತ್ರಿಕ ದೋಷ (ಸರ್ವರ್ ಡೌನ್) ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ದಿಢೀರನೆ ಜೂ.20ರಂದು ಆದೇಶ ಹೊರಡಿಸಿ ಪಡಿತರ ಚೀಟಿದಾರ ಕುಟುಂಬದ ಸದಸ್ಯರು ಇ-ಕೆವೈಸಿ ಮಾಡಿಕೊಳ್ಳುವುದನ್ನು ಜುಲೈ 15ರವರೆಗೆ ತಾತ್ಕಾಲಿಕವಾಗಿ ನಿಲ್ಲಿಸುವುದಾಗಿ ತಿಳಿಸಿತ್ತು.
ನಂತರ ತಾಂತ್ರಿಕ ದೋಷ ಸರಿಪಡಿಸಿದ ಬಳಿಕ ಇ-ಕೆವೈಸಿ ಆರಂಭಿಸುವುದಾಗಿ ಹೇಳಿದ್ದ ಸರ್ಕಾರ ಇಂದಿಗೂ ಇ-ಕೆವೈಸಿ ದೃಢೀಕರಣ ಪ್ರಕ್ರಿಯೆಯನ್ನು ಪುನಾರಂಭಿಸಿಲ್ಲ. ಹೀಗಾಗಿ ಬೋಗಸ್ ಫಲಾನುಭವಿಗಳನ್ನು ಪತ್ತೆಹಚ್ಚಲು ಮತ್ತು ಸೋರಿಕೆ ತಡೆಗಟ್ಟಲು ಸಾಧ್ಯವಾಗಿಲ್ಲ.
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…
ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…
ಉಡುಪಿ: ಸಂತೆಕಟ್ಟೆ ಅಂಡರ್ಪಾಸ್ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…