Featured

ಪಡಿತರ ಚೀಟಿ : ಕೆವೈಸಿ ದೃಢೀಕರಣವಿಲ್ಲದೆ ಸರ್ಕಾರಕ್ಕೆ ನಷ್ಟ -Vishwanews24

ಬೆಂಗಳೂರು:  ನಕಲಿ ಪಡಿತರ ಚೀಟಿಗಳನ್ನು ತಡೆಯಲು ಸಾಧ್ಯವಾಗುವುದಿಲ್ಲವಾದ್ದರಿಂದ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ ಸುಮಾರು 120ರಿಂದ 126 ಕೋಟಿ ರು. ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ.

ನಕಲಿ ಪಡಿತರ ಚೀಟಿಗಳು ಮತ್ತು ಬೋಗಸ್‌ ಫಲಾನುಭವಿಗಳ ಪತ್ತೆಗಾಗಿ ಇ-ಕೆವೈಸಿ ದೃಢೀಕರಣವನ್ನು ಕಡ್ಡಾಯವಾಗಿ ಮಾಡಿಸುವಂತೆ ಆಹಾರ ಇಲಾಖೆ ಆದೇಶ ಹೊರಡಿಸಿತ್ತು. ಜುಲೈ 21ರೊಳಗೆ ಇ-ಕೆವೈಸಿ ದೃಢೀಕರಣ ಮಾಡಿಸಿಕೊಳ್ಳದಿದ್ದರೆ ಪಡಿತರ ನೀಡುವುದನ್ನೇ ನಿಲ್ಲಿಸುವುದಾಗಿ ಇಲಾಖೆ ಆದೇಶದಲ್ಲಿ ಸ್ಪಷ್ಟಪಡಿಸಿತ್ತು.

ಆದರೆ, ಇ-ಕೆವೈಸಿ ದೃಢೀಕರಣ ಮತ್ತು ಪಡಿತರ ವಿತರಣೆಯನ್ನು ಒಂದೇ ಸಮಯದಲ್ಲಿ ಮಾಡುತ್ತಿದ್ದ ಕಾರಣ ತಾಂತ್ರಿಕ ದೋಷ (ಸರ್ವರ್‌ ಡೌನ್‌) ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ದಿಢೀರನೆ ಜೂ.20ರಂದು ಆದೇಶ ಹೊರಡಿಸಿ ಪಡಿತರ ಚೀಟಿದಾರ ಕುಟುಂಬದ ಸದಸ್ಯರು ಇ-ಕೆವೈಸಿ ಮಾಡಿಕೊಳ್ಳುವುದನ್ನು ಜುಲೈ 15ರವರೆಗೆ ತಾತ್ಕಾಲಿಕವಾಗಿ ನಿಲ್ಲಿಸುವುದಾಗಿ ತಿಳಿಸಿತ್ತು.

ನಂತರ ತಾಂತ್ರಿಕ ದೋಷ ಸರಿಪಡಿಸಿದ ಬಳಿಕ ಇ-ಕೆವೈಸಿ ಆರಂಭಿಸುವುದಾಗಿ ಹೇಳಿದ್ದ ಸರ್ಕಾರ ಇಂದಿಗೂ ಇ-ಕೆವೈಸಿ ದೃಢೀಕರಣ ಪ್ರಕ್ರಿಯೆಯನ್ನು ಪುನಾರಂಭಿಸಿಲ್ಲ. ಹೀಗಾಗಿ ಬೋಗಸ್‌ ಫಲಾನುಭವಿಗಳನ್ನು ಪತ್ತೆಹಚ್ಚಲು ಮತ್ತು ಸೋರಿಕೆ ತಡೆಗಟ್ಟಲು ಸಾಧ್ಯವಾಗಿಲ್ಲ.

 

 

 

Vishwa News 24

Recent Posts

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

17 minutes ago

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…

32 minutes ago

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…

37 minutes ago

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ – vishwanews24

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…

44 minutes ago

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ – vishwanews24

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…

50 minutes ago

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

21 hours ago