ಬೆಂಗಳೂರು: ಕೋವಿಡ್ ಲಸಿಕೆ ಪಡೆಯದವರಿಗೆ ಪಡಿತರವಿಲ್ಲ ಎಂಬುದಾಗಿ ಚಾಮರಾಜನಗರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ ಎಂಬ ಮಾತುಗಳಿಂದ ಗೊಂದಲ ಸೃಷ್ಟಿಯಾದ ಬೆನ್ನಲ್ಲೇ ಎಚ್ಚೆತ್ತ ಸರಕಾರ ಆ ರೀತಿಯ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಸ್ಪಷ್ಟಪಡಿಸಿದೆ.
ಈ ಸಂಬಂಧ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಗುರುವಾರ ಸುತ್ತೋಲೆ ಹೊರಡಿಸಿದ್ದಾರೆ. ಕೋವಿಡ್ ಲಸಿಕೆ ಪಡೆಯುವುದನ್ನು ಸರಕಾರದಿಂದ ನೀಡಲಾಗುವ ಪಡಿತರ , ಪಿಂಚಣಿಯಂತಹ ಯಾವುದೇ ಕಾರ್ಯಕ್ರಮ, ಯೋಜನೆಗೆ ಜೋಡಿಸಿಲ್ಲ.
ಕೋವಿಡ್ ಲಸಿಕೆ ಪಡೆಯುವ ಬಗ್ಗೆ ಜನರಿಗೆ ಯಾವುದೇ ನಿಬಂಧನೆ ಹೇರದೆ ಜಾಗೃತಿ ಮೂಡಿಸುವ ಅಭಿಯಾನದ ಮುಲಕ ಕೋವಿಡ್ ಲಸಿಕೆ ಕಾರ್ಯಕ್ರಮವನ್ನು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾಆರೋಗ್ಯಾಧಿಕಾರಿಗಳು ಯಶಸ್ವಿಯಾಗಿ ಪೂರ್ಣಗೊಳಿಸಬೇಕು. ಒಂದೊಮ್ಮೆ ಲಸಿಕಾ ಕಾರ್ಯಕ್ರಮವನ್ನು ಯಾವುದೇ ಕಾರ್ಯಕ್ರಮ/ ಯೋಜನೆಗೆ ತಪ್ಪಾಗಿ ಜೋಡಿಸಿದ್ದರೆ ತಕ್ಷಣ ಕೈಬಿಡಬೇಕು ಎಂದು ಸೂಚನೆ ನೀಡಿದ್ದಾರೆ.
ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…
ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ ; ಕಲಬುರಗಿಯ ಇಬ್ಬರು ಸುರಕ್ಷಿತ ಬೆಂಗಳೂರು: ನೇಪಾಳ-ಟಿಬೆಟ್…
ಸುಳ್ಯ: ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಲಾರಿ ಪಲ್ಟಿ ; ಮೂವರಿಗೆ ಗಂಭೀರ ಗಾಯ ಸುಳ್ಯ :ಅರಂತೋಡಿನ ದೇವರಕೊಲ್ಲಿ ಬಳಿ…
ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳದ ಸೌಜನ್ಯಾ ಮನೆಗೆ ಆರ್ಸ್ಎಸ್…
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…