ಉಡುಪಿ: ಪಡುಕರೆ ಬೀಚ್ ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸಿದಲ್ಲಿ ಮುಂದಿನ ಅಧಿವೇಶದಲ್ಲಿ ಮಂಡಿಸಿ ಕಾರ್ಯಗತಗೊಳಿಸಲು ಪ್ರಯತ್ನಿಸಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದರು.
ಉಡುಪಿ ಜಿಲ್ಲಾಡಳಿತ, ಉಡುಪಿ ಮತ್ತು ಮಲ್ಪೆ ಅಭಿವೃದ್ಧಿ ಸಮಿತಿ, ಉಡುಪಿ ನಗರಸಭೆ, ಪ್ರವಾಸೋದ್ಯಮ ಇಲಾಖೆ, ದ.ಕ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನಿನ ಸಹಯೋಗದೊಂದಿಗೆ ನಡೆದ ಮಲ್ಪೆ-ಪಡುಕರೆ ಬೀಚ್ ಸ್ವತ್ಛತಾ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.
ಗೋವಾ, ಕೇರಳದಂತೆ ಕರ್ನಾಟಕದ 300 ಕಿ.ಮೀ. ಉದ್ದದ ಕರಾವಳಿಯಲ್ಲಿ ಪ್ರವಾಸೋದ್ಯಮ ಬೆಳೆಸಬೇಕೆಂಬ ನಿಟ್ಟಿನಲ್ಲಿ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದ್ದು, ಕೇಂದ್ರ ಸರಕಾರದಿಂದ ಎಲ್ಲ ಸಹಕಾರ ದೊರೆಯಲಿದೆ ಎಂದು ತಿಳಿಸಿದರು.
ಶಾಸಕರ ಬೇಡಿಕೆಯಂತೆ ಕೇಂದ್ರ ಸರಕಾರದ ಸಾಗರಮಾಲಾ ಯೋಜನೆಯಡಿ ಪಡುಕರೆ ಸಮೀಪದ ಐಲ್ಯಾಂಡ್’ವರೆಗೆ ಬ್ರೇಕ್ ವಾಟರ್ ನಿರ್ಮಾಣ, ಪ್ರವಾಸಿ ಬೋಟುಗಳಿಗಾಗಿ ಇಲ್ಲಿ ಮರೀನಾ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಹೇಳಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…