ಮಲ್ಪೆ: ಮಲ್ಪೆಯ ಪಡುಕರೆ ತೀರದಲ್ಲಿ ದೋಣಿ ಎಳೆಯುತ್ತಿರುವ ವೇಳೆ ಬೃಹತ್ ಅಲೆ ಅಪ್ಪಳಿಸಿದ ಪರಿಣಾಮ ಓರ್ವ ಮೃತಪಟ್ಟು, ಇನೋರ್ವ ಸಮುದ್ರ ಪಾಲಾಗಿರುವ ಬಗ್ಗೆ ಬುಧವಾರ ಬೆಳಗ್ಗೆ ವರದಿಯಾಗಿದೆ.
ಮೃತರನ್ನು ಉದ್ಯಾವರ ಪಿತ್ರೋಡಿಯ ನಿತೇಶ್ (29) ಎಂದು ಗುರುತಿಸಲಾಗಿದ್ದು, ಅವರಿಗೆ 7 ತಿಂಗಳ ಹಿಂದೆ ವಿವಾಹವಾಗಿತ್ತು. ನಿಶಾಂತ್ ಎಂಬವರು ನೀರು ಪಾಲಾಗಿದ್ದು, ನಾಪತ್ತೆಯಾಗಿದ್ದಾರೆ.
ಇಂದು ಬೆಳಗ್ಗೆ ಮೀನುಗಾರಿಕೆ ಮುಗಿಸಿ ದಡಕ್ಕೆ ಬಂದಿದ್ದು, ಸುಮಾರು 200 ಮೀ. ದೂರದಲ್ಲಿ ಎಂಬತ್ತಕ್ಕೂ ಅಧಿಕ ಮಂದಿ ದೋಣಿಯನ್ನು ದಡಕ್ಕೆ ಎಳೆಯುವ ವೇಳೆ ಬೃಹತ್ ಅಲೆ ಅಪ್ಪಳಿಸಿದೆ ಎಂದು ತಿಳಿದುಬಂದಿದೆ.
ಘಟನೆಯಿಂದ ಇಬ್ಬರು ಯುವಕರು ನೀರಿನ ಸೆಲೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದು, ಓರ್ವನ ಮೃತ ದೇಹ ಅಲ್ಲೇ ಸಮೀಪ ಪತ್ತೆಯಾಗಿದ್ದು, ಇನೋರ್ವ ನೀರಿನಲ್ಲಿ ನಾಪತ್ತೆಯಾಗಿದ್ದಾರೆ.
ಮಲ್ಪೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತಿದ್ದಾರೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…