Featured

ಪಡುಬಿದ್ರಿಯಲ್ಲಿ ನಡೆಯಿತು ಕಾಂತಾರ ಶೈಲಿಯ ಘಟನೆ – ಕೋರ್ಟ್‍ನಲ್ಲಿ ನೋಡಿಕೊಳ್ತೇನೆಂದ ದೂರುದಾರ ಸಾವು – Vishwanews24

@ ಪಡುಬಿದ್ರಿಯಲ್ಲಿ ನಡೆಯಿತು ಕಾಂತಾರ ಶೈಲಿಯ ಘಟನೆ –

@ ಪಡುಹಿತ್ಲು ಜಾರಂದಾಯ ದೈವಸ್ಥಾನದ ನೇಮೋತ್ಸವ ವಿಚಾರ

@ ಕೋರ್ಟ್ ಮೆಟ್ಟಿಲೇರಿದ ಮರುದಿನವೇ ಟ್ರಸ್ಟಿ ಜಯ ಪೂಜಾರಿ ಸಾವು

ಉಡುಪಿ: ಜಿಲ್ಲೆಯ ಕಾಪು ತಾಲೂಕು ಪಡುಬಿದ್ರಿಯಲ್ಲಿ ಕಾಂತಾರ ಚಿತ್ರದ ಮಾದರಿಯಲ್ಲಿ ಘಟನೆಯೊಂದು ನಡೆದಿದೆ.

ಪಡುಹಿತ್ಲು ಜಾರಂದಾಯ ದೈವಸ್ಥಾನದ ನೇಮೋತ್ಸವ ವಿಚಾರದಲ್ಲಿ ತಗಾದೆ ಇತ್ತು. 500 ವರ್ಷ ಇತಿಹಾಸ ಇರುವ ಈ ದೈವಸ್ಥಾನದಲ್ಲಿ ಸಮಸ್ತರ ಪರವಾಗಿ ಒಂದು ಭಕ್ತ ಸಮಿತಿ ಇತ್ತು. ದೈವಸ್ಥಾನಕ್ಕೆ ಸಂಬಂಧಿಸಿದಂತೆ ಭಕ್ತರ ಗುಂಪೊಂದು ಟ್ರಸ್ಟ್ ರಚನೆ ಮಾಡಿದೆ. ನಮ್ಮ ಟ್ರಸ್ಟ್ (Trust) ನೇತೃತ್ವದಲ್ಲಿ ನೇಮೋತ್ಸವ ನಡೆಯುತ್ತದೆ ಎಂದು ಘೋಷಿಸಿದೆ.

ಆದರೆ ಮತ್ತೆ ಅಧಿಕಾರ ಪಡೆಯಬೇಕೆಂಬ ಹಠದಿಂದ ಪ್ರಕಾಶ್ ಶೆಟ್ಟಿ ಪ್ರತ್ಯೇಕ ಟ್ರಸ್ಟ್ ರಚಿಸಿದ ಬಂಡಾರ ಮನೆಯ ಗುರಿಕಾರರಾದ ಜಯ ಪೂಜಾರಿಯನ್ನು ಅಧ್ಯಕ್ಷರನ್ನಾಗಿ ನೇಮಿಸುತ್ತಾರೆ. ಹೀಗೆ 9 ಜನರ ಟ್ರಸ್ಟ್ ರಚಿಸಿದ ಪ್ರಕಾಶ್ ಶೆಟ್ಟಿ, ಇದರಲ್ಲಿ ಜಯ ಪೂಜಾರಿಯನ್ನು ಅಧ್ಯಕ್ಷರನ್ನಾಗಿ ನೇಮಿಸ್ತಾರೆ. ದೈವಸ್ಥಾನ ತಮಗೆ ಸೇರಿದ್ದು ಎಂದು ಹಕ್ಕು ಸ್ಥಾಪಿಸಲು ಯತ್ನಿಸುತ್ತಾರೆ.

ವರ್ಷಂಪ್ರತಿಯಂತೆ ಈ ವರ್ಷ ನೇಮೋತ್ಸವ ನಡೆಸಲು ಜಾರಂದಾಯ ದೈವಸ್ಥಾನ ಸಮಿತಿ ತೀರ್ಮಾನಿಸಿ, ಜನವರಿ 7 ರಂದು ಕೋಲ ನಡೆಸಲು ತೀರ್ಮಾನಿಸುತ್ತದೆ. ಇದರ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರುವ ಜಯಪೂಜಾರಿ ಮತ್ತು ಪ್ರಕಾಶ್ ಶೆಟ್ಟಿ‌ ಕೋಲಕ್ಕೆ ತಡೆಯಾಜ್ಞೆ ತರುವಲ್ಲಿ ಯಶಸ್ವಿಯಾಗುತ್ತಾರೆ. ಆಶ್ಚರ್ಯದ ಸಂಗತಿ ಎಂದರೆ ಡಿಸೆಂಬರ್ 23ಕ್ಕೆ ತಡೆಯಾಜ್ಞೆ ತಂದ ಜಯಪೂಜಾರಿ, ಡಿಸೆಂಬರ್ 24 ರಂದು ಹಠಾತ್ ಕುಸಿದು ಬಿದ್ದು ಸಾವನಪ್ಪಿದ್ದಾರೆ.

ಇದೀಗ ಜನವರಿ 7ಕ್ಕೆ ನಡೆಯಬೇಕಿದ್ದ ನೇಮೋತ್ಸವವನ್ನು ದೈವಸ್ಥಾನ‌ ಸಮಿತಿ‌ ಜಯ ಪೂಜಾರಿ ದೈವದೀನರಾದ ಕಾರಣಕ್ಕೆ ಮುಂದೂಡಿದೆ. ಆದರೆ ಹಠ ಬಿಡದ ಪ್ರಕಾಶ್ ಶೆಟ್ಟಿ ಮತ್ತು ತಂಡ ಜಯ ಪೂಜಾರಿಯವರ ಉತ್ತರಕ್ರಿಯೆಯ ದಿನವಾದ ಜ.7 ರಂದೇ ಕಾಲಾವಧಿ ನೇಮೋತ್ಸವ ಮಾಡಲು ಹೊರಟಿದೆ. ಕೋರ್ಟ್​​ನಲ್ಲಿ ತಡೆಯಾಜ್ಞೆ ತೆರವಾಗಿದ್ದರೂ ಊರವರ ವಿರುದ್ಧ ಹೊರಟಿರುವ ಪ್ರಕಾಶ್ ಶೆಟ್ಟಿ ಮತ್ತು ತಂಡದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದೀಗ ಊರ ಸಮಸ್ತರು ಸಭೆ ಸೇರಿ 500 ವರ್ಷಗಳ ಇತಿಹಾಸ ಇರುವ ಜಾರಂದಾಯ ಬಂಟ ಸೇವಾ ಸಮಿತಿ ಮಾಡುವ ನಿರ್ಣಯಕ್ಕೆ ಬದ್ಧ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

3 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

9 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

9 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

10 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

10 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

10 hours ago