ಉಡುಪಿ: ಜಿಲ್ಲೆಯ ಕಾಪು ತಾಲೂಕು ಪಡುಬಿದ್ರಿಯಲ್ಲಿ ಕಾಂತಾರ ಚಿತ್ರದ ಮಾದರಿಯಲ್ಲಿ ಘಟನೆಯೊಂದು ನಡೆದಿದೆ.
ಪಡುಹಿತ್ಲು ಜಾರಂದಾಯ ದೈವಸ್ಥಾನದ ನೇಮೋತ್ಸವ ವಿಚಾರದಲ್ಲಿ ತಗಾದೆ ಇತ್ತು. 500 ವರ್ಷ ಇತಿಹಾಸ ಇರುವ ಈ ದೈವಸ್ಥಾನದಲ್ಲಿ ಸಮಸ್ತರ ಪರವಾಗಿ ಒಂದು ಭಕ್ತ ಸಮಿತಿ ಇತ್ತು. ದೈವಸ್ಥಾನಕ್ಕೆ ಸಂಬಂಧಿಸಿದಂತೆ ಭಕ್ತರ ಗುಂಪೊಂದು ಟ್ರಸ್ಟ್ ರಚನೆ ಮಾಡಿದೆ. ನಮ್ಮ ಟ್ರಸ್ಟ್ (Trust) ನೇತೃತ್ವದಲ್ಲಿ ನೇಮೋತ್ಸವ ನಡೆಯುತ್ತದೆ ಎಂದು ಘೋಷಿಸಿದೆ.
ಆದರೆ ಮತ್ತೆ ಅಧಿಕಾರ ಪಡೆಯಬೇಕೆಂಬ ಹಠದಿಂದ ಪ್ರಕಾಶ್ ಶೆಟ್ಟಿ ಪ್ರತ್ಯೇಕ ಟ್ರಸ್ಟ್ ರಚಿಸಿದ ಬಂಡಾರ ಮನೆಯ ಗುರಿಕಾರರಾದ ಜಯ ಪೂಜಾರಿಯನ್ನು ಅಧ್ಯಕ್ಷರನ್ನಾಗಿ ನೇಮಿಸುತ್ತಾರೆ. ಹೀಗೆ 9 ಜನರ ಟ್ರಸ್ಟ್ ರಚಿಸಿದ ಪ್ರಕಾಶ್ ಶೆಟ್ಟಿ, ಇದರಲ್ಲಿ ಜಯ ಪೂಜಾರಿಯನ್ನು ಅಧ್ಯಕ್ಷರನ್ನಾಗಿ ನೇಮಿಸ್ತಾರೆ. ದೈವಸ್ಥಾನ ತಮಗೆ ಸೇರಿದ್ದು ಎಂದು ಹಕ್ಕು ಸ್ಥಾಪಿಸಲು ಯತ್ನಿಸುತ್ತಾರೆ.
ವರ್ಷಂಪ್ರತಿಯಂತೆ ಈ ವರ್ಷ ನೇಮೋತ್ಸವ ನಡೆಸಲು ಜಾರಂದಾಯ ದೈವಸ್ಥಾನ ಸಮಿತಿ ತೀರ್ಮಾನಿಸಿ, ಜನವರಿ 7 ರಂದು ಕೋಲ ನಡೆಸಲು ತೀರ್ಮಾನಿಸುತ್ತದೆ. ಇದರ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರುವ ಜಯಪೂಜಾರಿ ಮತ್ತು ಪ್ರಕಾಶ್ ಶೆಟ್ಟಿ ಕೋಲಕ್ಕೆ ತಡೆಯಾಜ್ಞೆ ತರುವಲ್ಲಿ ಯಶಸ್ವಿಯಾಗುತ್ತಾರೆ. ಆಶ್ಚರ್ಯದ ಸಂಗತಿ ಎಂದರೆ ಡಿಸೆಂಬರ್ 23ಕ್ಕೆ ತಡೆಯಾಜ್ಞೆ ತಂದ ಜಯಪೂಜಾರಿ, ಡಿಸೆಂಬರ್ 24 ರಂದು ಹಠಾತ್ ಕುಸಿದು ಬಿದ್ದು ಸಾವನಪ್ಪಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…