Featured

ಪಡುಬಿದ್ರಿ ಸಮುದ್ರ ತೀರದಲ್ಲಿ ಮತ್ತೆ ತೀವ್ರಗೊಂಡ ಕಡಲ್ಕೊರೆತ -Vishwanews24

ಪಡುಬಿದ್ರಿಯಲ್ಲಿ ಸಮುದ್ರ ತೀರದಲ್ಲಿ ಮತ್ತೆ ತೀವ್ರಗೊಂಡ ಕಡಲ್ಕೊರೆತ -Vishwanews24

ಪಡುಬಿದ್ರಿ : ಪಡುಬಿದ್ರಿಯಲ್ಲಿ ಮತ್ತೆ ಕಡಲ್ಕೊರೆತ ತೀವ್ರಗೊಂಡಿದ್ದು,ಇಲ್ಲಿನ ಕಾಡಿಪಟ್ಣ ಸಮುದ್ರ ತೀರದಲ್ಲಿರುವ ವೀಕ್ಷಣಾ ಗೋಪುರ,ವಿಶ್ರಾಂತಿ ಗೃಹ ಕಡಲೊಡಲು ಸೇರುವ ಎಲ್ಲಾ ಸಾಧ್ಯತೆಗಳಿವೆ.

ಕಳೆದ ಬಾರಿಯು ಈ ಪ್ರದೇಶದಲ್ಲಿ ಕಡಲ್ಕೊರೆತ ಉಂಟಾಗಿ ಪ್ರವಾಸೋದ್ಯಮ ಇಲಾಖೆಯಿಂದ ನಿರ್ಮಾಣಗೊಂಡ ವೇದಿಕೆ, ವಿದ್ಯುತ್ ಕಂಬಗಳು,ಇಂಟರ್ಲಾಕ್ ಹಾಗು ತೆಂಗಿನ ಮರಗಳು ಸಮುದ್ರ ಪಾಲಾಗಿತ್ತು.ಆ ಸಮಯದಲ್ಲಿ ಕಡಲ್ಕೊರೆತ ಪ್ರದೇಶಗಳಿಗೆ ಕಂದಾಯ ಸಚಿವ ಆರ್ ಅಶೋಕ್ ಭೇಟಿ ನೀಡಿದ್ದು, ನಿರ್ಮಾಣ ಕಾಮಗಾರಿಗಳನ್ನು ತೆರವುಗೊಳಿಸಲು ಸೂಚಿಸಿದ್ದರು.ಆದರೂ ಈ ಭಾಗದಲ್ಲಿ ಪ್ರವಾಸೋದ್ಯಮ ಇಲಾಖೆ ಮೂಲಕ ಶೌಚಾಲಯ ನಿರ್ಮಿಸಲಾಗಿದೆ.ಈಗ ಕಡಲ್ಕೊರೆತ ಕಾಣಿಸಿಕೊಂಡಿರುವ ಅನತಿ ದೂರದಲ್ಲಿ ತಡೆಗೋಡೆ ಕಾಮಗಾರಿಯೂ ನಡೆದಿದೆ.ಅದರ ಕಲ್ಲುಗಳು ಸಮುದ್ರ ಪಾಲಾಗುತ್ತಿದೆ.ಈ ಪ್ರದೇಶದಲ್ಲಿ ಕಳೆದ ಒಂದು ವಾರಗಳಿಂದ ಕೊರೆತ ಕಾಣಿಸಿಕೊಂಡಿದ್ದು,ಹಲವು ತೆಂಗಿನ ಮರಗಳು ಸಮುದ್ರ ಪಾಲಾಗಿದೆ.ಇದೀಗ ಈ ಪ್ರದೇಶದಲ್ಲಿರುವ ವೀಕ್ಷಣಾ ಗೋಪುರ ವಿಶ್ರಾಂತಿ ಗೃಹ ಸಮುದ್ರ ಪಾಲಾಗುವ ಭೀತಿ ಎದುರಾಗಿದೆ.

ವೀಕ್ಷಣಾ ಗೋಪುರ ಉಳಿಸುವ ನಿಟ್ಟಿನಲ್ಲಿ ಬ್ಲೂ ಪ್ಲಾಗ್ ಬೀಚ್ನ ಕಾರ್ಮಿಕರು ವೀಕ್ಷಣಾ ಗೋಪುರದ ಬುಡದಲ್ಲೇ ಇದ್ದ ಮರಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿಸಿ ಗೋಪುರದ ಸುತ್ತ ಹಾಕಲಾಗಿದ್ದು ಈಗಾಗಲೇ 50 ಕ್ಕೂ ಅಧಿಕ ಮರಳು ಚೀಲಗಳು ಸಮುದ್ರ ಪಾಲಾಗಿದೆ.ಈ ಬಗ್ಗೆ ಕಾಡಿಪಟ್ಣ ಮೊಗವೀರ ಮಹಾ ಸಭಾ ಅಧ್ಯಕ್ಷ ಅಶೋಕ್ ಸಾಲ್ಯಾನ್ ಮಾತನಾಡಿ ಸಂಬಂಧಿತ ಇಲಾಖೆ ಕೂಡಲೇ ಗಮನ ಹರಿಸಬೇಕೆಂದು ಒತ್ತಾಯಿಸಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

12 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

13 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

13 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

14 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

15 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

15 hours ago