Featured

ಪಡುಬಿದ್ರಿ ಸಮುದ್ರ ತೀರದಲ್ಲಿ ಮತ್ತೆ ತೀವ್ರಗೊಂಡ ಕಡಲ್ಕೊರೆತ -Vishwanews24

ಪಡುಬಿದ್ರಿಯಲ್ಲಿ ಸಮುದ್ರ ತೀರದಲ್ಲಿ ಮತ್ತೆ ತೀವ್ರಗೊಂಡ ಕಡಲ್ಕೊರೆತ -Vishwanews24

ಪಡುಬಿದ್ರಿ : ಪಡುಬಿದ್ರಿಯಲ್ಲಿ ಮತ್ತೆ ಕಡಲ್ಕೊರೆತ ತೀವ್ರಗೊಂಡಿದ್ದು,ಇಲ್ಲಿನ ಕಾಡಿಪಟ್ಣ ಸಮುದ್ರ ತೀರದಲ್ಲಿರುವ ವೀಕ್ಷಣಾ ಗೋಪುರ,ವಿಶ್ರಾಂತಿ ಗೃಹ ಕಡಲೊಡಲು ಸೇರುವ ಎಲ್ಲಾ ಸಾಧ್ಯತೆಗಳಿವೆ.

ಕಳೆದ ಬಾರಿಯು ಈ ಪ್ರದೇಶದಲ್ಲಿ ಕಡಲ್ಕೊರೆತ ಉಂಟಾಗಿ ಪ್ರವಾಸೋದ್ಯಮ ಇಲಾಖೆಯಿಂದ ನಿರ್ಮಾಣಗೊಂಡ ವೇದಿಕೆ, ವಿದ್ಯುತ್ ಕಂಬಗಳು,ಇಂಟರ್ಲಾಕ್ ಹಾಗು ತೆಂಗಿನ ಮರಗಳು ಸಮುದ್ರ ಪಾಲಾಗಿತ್ತು.ಆ ಸಮಯದಲ್ಲಿ ಕಡಲ್ಕೊರೆತ ಪ್ರದೇಶಗಳಿಗೆ ಕಂದಾಯ ಸಚಿವ ಆರ್ ಅಶೋಕ್ ಭೇಟಿ ನೀಡಿದ್ದು, ನಿರ್ಮಾಣ ಕಾಮಗಾರಿಗಳನ್ನು ತೆರವುಗೊಳಿಸಲು ಸೂಚಿಸಿದ್ದರು.ಆದರೂ ಈ ಭಾಗದಲ್ಲಿ ಪ್ರವಾಸೋದ್ಯಮ ಇಲಾಖೆ ಮೂಲಕ ಶೌಚಾಲಯ ನಿರ್ಮಿಸಲಾಗಿದೆ.ಈಗ ಕಡಲ್ಕೊರೆತ ಕಾಣಿಸಿಕೊಂಡಿರುವ ಅನತಿ ದೂರದಲ್ಲಿ ತಡೆಗೋಡೆ ಕಾಮಗಾರಿಯೂ ನಡೆದಿದೆ.ಅದರ ಕಲ್ಲುಗಳು ಸಮುದ್ರ ಪಾಲಾಗುತ್ತಿದೆ.ಈ ಪ್ರದೇಶದಲ್ಲಿ ಕಳೆದ ಒಂದು ವಾರಗಳಿಂದ ಕೊರೆತ ಕಾಣಿಸಿಕೊಂಡಿದ್ದು,ಹಲವು ತೆಂಗಿನ ಮರಗಳು ಸಮುದ್ರ ಪಾಲಾಗಿದೆ.ಇದೀಗ ಈ ಪ್ರದೇಶದಲ್ಲಿರುವ ವೀಕ್ಷಣಾ ಗೋಪುರ ವಿಶ್ರಾಂತಿ ಗೃಹ ಸಮುದ್ರ ಪಾಲಾಗುವ ಭೀತಿ ಎದುರಾಗಿದೆ.

ವೀಕ್ಷಣಾ ಗೋಪುರ ಉಳಿಸುವ ನಿಟ್ಟಿನಲ್ಲಿ ಬ್ಲೂ ಪ್ಲಾಗ್ ಬೀಚ್ನ ಕಾರ್ಮಿಕರು ವೀಕ್ಷಣಾ ಗೋಪುರದ ಬುಡದಲ್ಲೇ ಇದ್ದ ಮರಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿಸಿ ಗೋಪುರದ ಸುತ್ತ ಹಾಕಲಾಗಿದ್ದು ಈಗಾಗಲೇ 50 ಕ್ಕೂ ಅಧಿಕ ಮರಳು ಚೀಲಗಳು ಸಮುದ್ರ ಪಾಲಾಗಿದೆ.ಈ ಬಗ್ಗೆ ಕಾಡಿಪಟ್ಣ ಮೊಗವೀರ ಮಹಾ ಸಭಾ ಅಧ್ಯಕ್ಷ ಅಶೋಕ್ ಸಾಲ್ಯಾನ್ ಮಾತನಾಡಿ ಸಂಬಂಧಿತ ಇಲಾಖೆ ಕೂಡಲೇ ಗಮನ ಹರಿಸಬೇಕೆಂದು ಒತ್ತಾಯಿಸಿದ್ದಾರೆ.

Vishwa News 24

Recent Posts

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

22 minutes ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

32 minutes ago

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…

39 minutes ago

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – vishwanews24

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ…

56 minutes ago

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

1 hour ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

22 hours ago