Featured

ಪಡುಬಿದ್ರಿ ಸಮುದ್ರ ತೀರದಲ್ಲಿ ಮತ್ತೆ ತೀವ್ರಗೊಂಡ ಕಡಲ್ಕೊರೆತ -Vishwanews24

ಪಡುಬಿದ್ರಿಯಲ್ಲಿ ಸಮುದ್ರ ತೀರದಲ್ಲಿ ಮತ್ತೆ ತೀವ್ರಗೊಂಡ ಕಡಲ್ಕೊರೆತ -Vishwanews24

ಪಡುಬಿದ್ರಿ : ಪಡುಬಿದ್ರಿಯಲ್ಲಿ ಮತ್ತೆ ಕಡಲ್ಕೊರೆತ ತೀವ್ರಗೊಂಡಿದ್ದು,ಇಲ್ಲಿನ ಕಾಡಿಪಟ್ಣ ಸಮುದ್ರ ತೀರದಲ್ಲಿರುವ ವೀಕ್ಷಣಾ ಗೋಪುರ,ವಿಶ್ರಾಂತಿ ಗೃಹ ಕಡಲೊಡಲು ಸೇರುವ ಎಲ್ಲಾ ಸಾಧ್ಯತೆಗಳಿವೆ.

ಕಳೆದ ಬಾರಿಯು ಈ ಪ್ರದೇಶದಲ್ಲಿ ಕಡಲ್ಕೊರೆತ ಉಂಟಾಗಿ ಪ್ರವಾಸೋದ್ಯಮ ಇಲಾಖೆಯಿಂದ ನಿರ್ಮಾಣಗೊಂಡ ವೇದಿಕೆ, ವಿದ್ಯುತ್ ಕಂಬಗಳು,ಇಂಟರ್ಲಾಕ್ ಹಾಗು ತೆಂಗಿನ ಮರಗಳು ಸಮುದ್ರ ಪಾಲಾಗಿತ್ತು.ಆ ಸಮಯದಲ್ಲಿ ಕಡಲ್ಕೊರೆತ ಪ್ರದೇಶಗಳಿಗೆ ಕಂದಾಯ ಸಚಿವ ಆರ್ ಅಶೋಕ್ ಭೇಟಿ ನೀಡಿದ್ದು, ನಿರ್ಮಾಣ ಕಾಮಗಾರಿಗಳನ್ನು ತೆರವುಗೊಳಿಸಲು ಸೂಚಿಸಿದ್ದರು.ಆದರೂ ಈ ಭಾಗದಲ್ಲಿ ಪ್ರವಾಸೋದ್ಯಮ ಇಲಾಖೆ ಮೂಲಕ ಶೌಚಾಲಯ ನಿರ್ಮಿಸಲಾಗಿದೆ.ಈಗ ಕಡಲ್ಕೊರೆತ ಕಾಣಿಸಿಕೊಂಡಿರುವ ಅನತಿ ದೂರದಲ್ಲಿ ತಡೆಗೋಡೆ ಕಾಮಗಾರಿಯೂ ನಡೆದಿದೆ.ಅದರ ಕಲ್ಲುಗಳು ಸಮುದ್ರ ಪಾಲಾಗುತ್ತಿದೆ.ಈ ಪ್ರದೇಶದಲ್ಲಿ ಕಳೆದ ಒಂದು ವಾರಗಳಿಂದ ಕೊರೆತ ಕಾಣಿಸಿಕೊಂಡಿದ್ದು,ಹಲವು ತೆಂಗಿನ ಮರಗಳು ಸಮುದ್ರ ಪಾಲಾಗಿದೆ.ಇದೀಗ ಈ ಪ್ರದೇಶದಲ್ಲಿರುವ ವೀಕ್ಷಣಾ ಗೋಪುರ ವಿಶ್ರಾಂತಿ ಗೃಹ ಸಮುದ್ರ ಪಾಲಾಗುವ ಭೀತಿ ಎದುರಾಗಿದೆ.

ವೀಕ್ಷಣಾ ಗೋಪುರ ಉಳಿಸುವ ನಿಟ್ಟಿನಲ್ಲಿ ಬ್ಲೂ ಪ್ಲಾಗ್ ಬೀಚ್ನ ಕಾರ್ಮಿಕರು ವೀಕ್ಷಣಾ ಗೋಪುರದ ಬುಡದಲ್ಲೇ ಇದ್ದ ಮರಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿಸಿ ಗೋಪುರದ ಸುತ್ತ ಹಾಕಲಾಗಿದ್ದು ಈಗಾಗಲೇ 50 ಕ್ಕೂ ಅಧಿಕ ಮರಳು ಚೀಲಗಳು ಸಮುದ್ರ ಪಾಲಾಗಿದೆ.ಈ ಬಗ್ಗೆ ಕಾಡಿಪಟ್ಣ ಮೊಗವೀರ ಮಹಾ ಸಭಾ ಅಧ್ಯಕ್ಷ ಅಶೋಕ್ ಸಾಲ್ಯಾನ್ ಮಾತನಾಡಿ ಸಂಬಂಧಿತ ಇಲಾಖೆ ಕೂಡಲೇ ಗಮನ ಹರಿಸಬೇಕೆಂದು ಒತ್ತಾಯಿಸಿದ್ದಾರೆ.

Vishwa News 24

Recent Posts

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

14 minutes ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

32 minutes ago

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago